ಬ್ರೇಕಿಂಗ್ ನ್ಯೂಸ್
29-07-23 03:45 pm Udupi Correspondent ಕರಾವಳಿ
ಉಡುಪಿ, ಜುಲೈ 29: ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.
ಬಿಜೆಪಿಯ ಪ್ರತಿಭಟನೆಯ ಬೆನ್ನಲ್ಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಛಿಂದ್ರ, ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರನ್ನು ಜು. 29ರಂದು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿಯರು ಏನು ಹೇಳಿದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯರು ಈಗಾಗಲೇ ಜಾಮೀನು ಪಡೆದಿದ್ದಾರೆ.

ಪ್ರಿಯಾಂಕ್ ಖರ್ಗೆ ಕಿಡಿ :
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಪ್ರಕರಣದಲ್ಲಿ ಬಿಜೆಪಿ ತನ್ನ ರಾಜಕೀಯ ಮುಂದುವರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ನಟಿ ಖುಷ್ಬೂ ಸುಂದರ್ ಅವರೇ ಖುದ್ದಾಗಿ, ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಚಿತ್ರೀಕರಣವಾಗಿಲ್ಲ. ವಿಡಿಯೋ ಚಿತ್ರೀಕರಣದ ಸಾಕ್ಷಿಗಳೇ ಸಿಕ್ಕಿಲ್ಲದಿದ್ದಾಗ ಕೇಸ್ ದಾಖಲಿಸಲು ಸಾಧ್ಯವಾಗುವುದೇ ಇಲ್ಲ ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಆರೋಪ:
ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಹಿಂದೆಯೂ ಉಡುಪಿಯ ಆ ವೈದ್ಯಕೀಯ ಕಾಲೇಜಿನಲ್ಲಿ ಇಂಥ ಘಟನೆಗಳು ನಡೆದಿರುವುದಾಗಿ ಹೇಳಲಾಗಿದೆ. ಆ ಕಾಲೇಜಿನ ಹಿಂಬಾಗದ ಕಾಂಪೌಂಡ್ ನ ಬಳಿ ಮೂವರು ಹುಡುಗರು ಬರುತ್ತಿದ್ದರಂತೆ. ಅವರು ಯಾರು ಎಂಬಿತ್ಯಾದಿ ವಿಚಾರಗಳನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಿದೆ ಎಂದು ಆಗ್ರಹಿಸಿದ್ದಾರೆ.
Udupi college Video case, Investigation police officer changed aftet BJP protest, DYSP Belliappa New officer by SP.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm