ಬ್ರೇಕಿಂಗ್ ನ್ಯೂಸ್
29-07-23 03:45 pm Udupi Correspondent ಕರಾವಳಿ
ಉಡುಪಿ, ಜುಲೈ 29: ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.
ಬಿಜೆಪಿಯ ಪ್ರತಿಭಟನೆಯ ಬೆನ್ನಲ್ಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಛಿಂದ್ರ, ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರನ್ನು ಜು. 29ರಂದು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿಯರು ಏನು ಹೇಳಿದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯರು ಈಗಾಗಲೇ ಜಾಮೀನು ಪಡೆದಿದ್ದಾರೆ.

ಪ್ರಿಯಾಂಕ್ ಖರ್ಗೆ ಕಿಡಿ :
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಪ್ರಕರಣದಲ್ಲಿ ಬಿಜೆಪಿ ತನ್ನ ರಾಜಕೀಯ ಮುಂದುವರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ನಟಿ ಖುಷ್ಬೂ ಸುಂದರ್ ಅವರೇ ಖುದ್ದಾಗಿ, ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಚಿತ್ರೀಕರಣವಾಗಿಲ್ಲ. ವಿಡಿಯೋ ಚಿತ್ರೀಕರಣದ ಸಾಕ್ಷಿಗಳೇ ಸಿಕ್ಕಿಲ್ಲದಿದ್ದಾಗ ಕೇಸ್ ದಾಖಲಿಸಲು ಸಾಧ್ಯವಾಗುವುದೇ ಇಲ್ಲ ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಆರೋಪ:
ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಹಿಂದೆಯೂ ಉಡುಪಿಯ ಆ ವೈದ್ಯಕೀಯ ಕಾಲೇಜಿನಲ್ಲಿ ಇಂಥ ಘಟನೆಗಳು ನಡೆದಿರುವುದಾಗಿ ಹೇಳಲಾಗಿದೆ. ಆ ಕಾಲೇಜಿನ ಹಿಂಬಾಗದ ಕಾಂಪೌಂಡ್ ನ ಬಳಿ ಮೂವರು ಹುಡುಗರು ಬರುತ್ತಿದ್ದರಂತೆ. ಅವರು ಯಾರು ಎಂಬಿತ್ಯಾದಿ ವಿಚಾರಗಳನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಿದೆ ಎಂದು ಆಗ್ರಹಿಸಿದ್ದಾರೆ.
Udupi college Video case, Investigation police officer changed aftet BJP protest, DYSP Belliappa New officer by SP.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm