ಬ್ರೇಕಿಂಗ್ ನ್ಯೂಸ್
29-07-23 03:45 pm Udupi Correspondent ಕರಾವಳಿ
ಉಡುಪಿ, ಜುಲೈ 29: ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.
ಬಿಜೆಪಿಯ ಪ್ರತಿಭಟನೆಯ ಬೆನ್ನಲ್ಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಛಿಂದ್ರ, ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರನ್ನು ಜು. 29ರಂದು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿಯರು ಏನು ಹೇಳಿದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯರು ಈಗಾಗಲೇ ಜಾಮೀನು ಪಡೆದಿದ್ದಾರೆ.
ಪ್ರಿಯಾಂಕ್ ಖರ್ಗೆ ಕಿಡಿ :
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಪ್ರಕರಣದಲ್ಲಿ ಬಿಜೆಪಿ ತನ್ನ ರಾಜಕೀಯ ಮುಂದುವರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ನಟಿ ಖುಷ್ಬೂ ಸುಂದರ್ ಅವರೇ ಖುದ್ದಾಗಿ, ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಚಿತ್ರೀಕರಣವಾಗಿಲ್ಲ. ವಿಡಿಯೋ ಚಿತ್ರೀಕರಣದ ಸಾಕ್ಷಿಗಳೇ ಸಿಕ್ಕಿಲ್ಲದಿದ್ದಾಗ ಕೇಸ್ ದಾಖಲಿಸಲು ಸಾಧ್ಯವಾಗುವುದೇ ಇಲ್ಲ ಎಂದು ಹೇಳಿದ್ದಾರೆ.
ಶೋಭಾ ಕರಂದ್ಲಾಜೆ ಆರೋಪ:
ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಹಿಂದೆಯೂ ಉಡುಪಿಯ ಆ ವೈದ್ಯಕೀಯ ಕಾಲೇಜಿನಲ್ಲಿ ಇಂಥ ಘಟನೆಗಳು ನಡೆದಿರುವುದಾಗಿ ಹೇಳಲಾಗಿದೆ. ಆ ಕಾಲೇಜಿನ ಹಿಂಬಾಗದ ಕಾಂಪೌಂಡ್ ನ ಬಳಿ ಮೂವರು ಹುಡುಗರು ಬರುತ್ತಿದ್ದರಂತೆ. ಅವರು ಯಾರು ಎಂಬಿತ್ಯಾದಿ ವಿಚಾರಗಳನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಿದೆ ಎಂದು ಆಗ್ರಹಿಸಿದ್ದಾರೆ.
Udupi college Video case, Investigation police officer changed aftet BJP protest, DYSP Belliappa New officer by SP.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 02:00 pm
HK News Desk
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm