ಬ್ರೇಕಿಂಗ್ ನ್ಯೂಸ್
30-07-23 03:16 pm Udupi Correspondent ಕರಾವಳಿ
ಉಡುಪಿ, ಜುಲೈ 30: ಇತ್ತೀಚೆಗೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಯತಪ್ಪಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಘಟ್ಟ ಪ್ರದೇಶದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಎನ್ ಡಿಆರ್ ಎಫ್ ಸಿಬಂದಿ ಹುಡುಕಾಡುತ್ತಿದ್ದಾಗ ಶರತ್ ಬಿದ್ದ ಜಾಗದಿಂದ 200 ಮೀಟರ್ ದೂರದ ಕಲ್ಲು ಬಂಡೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಶರತ್ ಒಂದು ವಾರದ ಹಿಂದೆ ಕಳೆದ ಭಾನುವಾರ (ಜು.23ರಂದು) ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು ಸೌಪರ್ಣಿಕಾ ನದಿಯ ಸೆಳೆತಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಜಲಪಾತಕ್ಕೆ ಬೀಳುತ್ತಿದ್ದ ದೃಶ್ಯಗಳು ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿತ್ತು.
ಶರತ್ ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು. ಕೊಲ್ಲೂರು ಠಾಣೆ ಉಪನಿರೀಕ್ಷಕಿಯರಾದ ಜಯಶ್ರೀ, ಸುಧಾರಾಣಿ, ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ, ಎಸ್.ಡಿ.ಆರ್.ಎಫ್ ತಂಡ, ಉಡುಪಿ, ಬೈಂದೂರು, ಕುಂದಾಪುರ ಅಗ್ನಿಶಾಮಕ ತಂಡದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ, ಜಿಗಣೆ ಕಾಟದ ನಡುವೆ ಕಾರ್ಯಾಚರಣೆ ನಡೆಸಲಾಗಿತ್ತು.
Arashinagundi falls missing sharath body found 200 meters below the falls in the rocks. The body was found wedged underneath a rock. Sharath, hailing from Bhadravathi, had visited Arashinagundi Falls on July 23 for sightseeing.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm