ಬ್ರೇಕಿಂಗ್ ನ್ಯೂಸ್
05-11-20 11:09 am Mangalore Correspondent ಕರಾವಳಿ
ಉಳ್ಳಾಲ, ನವೆಂಬರ್ 05: ಶಿರಾ ಮತ್ತು ಆರ್.ಆರ್ ನಗರ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯೇ ಜಯಭೇರಿ ಗಳಿಸೋದೆಂದು ವಿರೋಧ ಪಕ್ಷದವರಿಗೆ ಅರಿವಾಗಿದೆ. ಕರ್ನಾಟಕದ ಇತಿಹಾಸದಲ್ಲೇ ಬಿಜೆಪಿ ಗೆಲ್ಲದ ಶಿರಾ ಕ್ಷೇತ್ರದಲ್ಲಿ ಈ ಬಾರಿ ಕನಿಷ್ಠ 25,000 ಮತಗಳ ಅಂತರದಲ್ಲಿ ಜಯ ಗಳಿಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬಂದಿರುವ ವಿಜಯೇಂದ್ರ, ಕುತ್ತಾರು ಬಾಲಸಂರಕ್ಷಣಾ ಕೇಂದ್ರದ ಮಕ್ಕಳೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ಆಶ್ರಮದ ಗೋವುಗಳಿಗೆ ಗೋಗ್ರಾಸ ಅರ್ಪಿಸಿ, ಆಶ್ರಮ ನಿವಾಸಿ ಮಕ್ಕಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದರು. ಬಾಲಸಂರಕ್ಷಣಾ ಕೇಂದ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವ್ ಹ್ಯಾಗ್ ಬದಕಬೇಕೆಂಬುದನ್ನು ನಮಗೆ ಯಾರೂ ಕಲಿಸಬೇಕಿಲ್ಲ. ಅದು ನಮ್ಮ ಹಕ್ಕು. ಆದರೆ ಇನ್ನೊಬ್ಬರಿಗೋಸ್ಕರ ಬದುಕೋದೇ ಶ್ರೇಷ್ಠ ಅನ್ನೋದನ್ನ ಬಾಲಸಂರಕ್ಷಣಾ ಕೇಂದ್ರದ ಸಂಚಾಲಕರಾದ ಅನಂತಕೃಷ್ಣರು ಕಲಿಸಿ ಕೊಟ್ಟಿದ್ದಾರೆ. ಅವರ ಈ ಸೇವೆಯು ನಿಜಕ್ಕೂ ಗಣನೀಯ. ಎಂತಹ ಸಂಕಷ್ಟ, ಆರ್ಥಿಕ ಅಡಚಣೆಯಲ್ಲೂ ಅವರು ತಮ್ಮ ಸೇವೆಯನ್ನು ಎಂದಿಗೂ ನಿಲ್ಲಿಸದೆ ಮುಂದುವರೆಸುತ್ತಾ ಬಂದಿರುವುದನ್ನ ನಾನು ಕೇಳಿದ್ದೇನೆ. ಹುಟ್ಟುಹಬ್ಬ ಆಚರಿಸುವ ಯೋಚನೆ ಇರಲಿಲ್ಲ. ಆದರೆ ಇಲ್ಲಿನ ಮುಖಂಡರ ಆಶಯದಂತೆ ಇಲ್ಲಿ ಹುಟ್ಟುಹಬ್ಬ ಆಚರಿಸಿದ್ದು ನನಗೂ ಬಹಳ ಸಂತಸವಾಗಿದೆ.




ರಾಜ್ಯಾದ್ಯಂತ ನಾನು ತಿರುಗುವಾಗ ರಾಜ್ಯದ ಮುಖ್ಯಮಂತ್ರಿಗಳ ಮಗನೆನ್ನದೆ, ಯಡಿಯೂರಪ್ಪರ ಮಗ ಬಂದಿದ್ದಾರೆ ಎಂದು ಗುರುತಿಸುತ್ತಿರುವುದು ಸಂತಸ ತರುತ್ತಿದೆ ಎಂದರು.
ಬಾಲಸಂರಕ್ಷಣಾ ಕೇಂದ್ರದ ಸಂಚಾಲಕರಾದ ಡಾ.ಪಿ.ಅನಂತಕೃಷ್ಣ ಭಟ್ ಮಾತನಾಡಿ ಕರ್ನಾಟಕ, ಅರುಣಾಚಲ, ಪಶ್ಚಿಮ ಬಂಗಾಳ ಹೀಗೆ ದೇಶದ ಅನೇಕ ಕಡೆಯ ಮಕ್ಕಳು ಇಲ್ಲಿ ಉಚಿತ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೊದಲು ಯಡಿಯೂರಪ್ಪ ಅವರೇ ಇಲ್ಲಿಗೆ ಬಂದಿದ್ದರು. ಅವರ ಪುತ್ರರಾದ ವಿಜಯೇಂದ್ರ ಇವತ್ತು ಇಲ್ಲಿ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು ಅವರಿಗೆ ಉಜ್ವಲ ಭವಿಷ್ಯ ಸಿಕ್ಕಲಿ ಎಂದು ಹಾರೈಸಿದರು.
We shall create history in breaking the records of Sira and R R Nagar elections stated B Y Vijayendra in Ullal during his birthday celebrations in Mangalore.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am