ಬ್ರೇಕಿಂಗ್ ನ್ಯೂಸ್
31-07-23 03:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟಿನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ನಗರದ ಶಿವಭಾಗ್ ನಲ್ಲಿ ನಡೆದಿದೆ.
ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್ ಶೆಟ್ಟಿ (21) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಸಮಯ್ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಬಾತ್ರೂಂಗೆ ಹೋಗಿದ್ದು ತಾಯಿ ನೆಲ ಮಹಡಿಗೆ ತಲುಪಿದ್ದರು. ಹೀಗಾಗಿ ಮರಳಿ ಫ್ಲ್ಯಾಟ್ನ ಬಾಲ್ಕನಿಗೆ ತೆರಳಿದ್ದ ಸಮಯ್ ಅಲ್ಲಿಂದ ತಾಯಿಯನ್ನು ಕರೆದಿದ್ದ. ತಾಯಿಗೆ ಕರೆದಿದ್ದು ಕೇಳಿಲ್ಲ ಅಂತ ಬಗ್ಗಿದ್ದ ಎನ್ನಲಾಗುತ್ತಿದ್ದು ಈ ವೇಳೆ ಮಳೆ ನೀರಿನಿಂದಾಗಿ ಜಾರಿ ಮೂರು ಫೀಟ್ ಎತ್ತರದ ತಡೆಗೋಡೆ ದಾಟಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಸಮಯ್ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವನು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old Medical student accidently falls from 5th floor of appartment building at Shivabagh in Mangalore. The deceased has been identified as Samay Shetty.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm