ಬ್ರೇಕಿಂಗ್ ನ್ಯೂಸ್
31-07-23 03:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟಿನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ನಗರದ ಶಿವಭಾಗ್ ನಲ್ಲಿ ನಡೆದಿದೆ.
ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್ ಶೆಟ್ಟಿ (21) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಸಮಯ್ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಬಾತ್ರೂಂಗೆ ಹೋಗಿದ್ದು ತಾಯಿ ನೆಲ ಮಹಡಿಗೆ ತಲುಪಿದ್ದರು. ಹೀಗಾಗಿ ಮರಳಿ ಫ್ಲ್ಯಾಟ್ನ ಬಾಲ್ಕನಿಗೆ ತೆರಳಿದ್ದ ಸಮಯ್ ಅಲ್ಲಿಂದ ತಾಯಿಯನ್ನು ಕರೆದಿದ್ದ. ತಾಯಿಗೆ ಕರೆದಿದ್ದು ಕೇಳಿಲ್ಲ ಅಂತ ಬಗ್ಗಿದ್ದ ಎನ್ನಲಾಗುತ್ತಿದ್ದು ಈ ವೇಳೆ ಮಳೆ ನೀರಿನಿಂದಾಗಿ ಜಾರಿ ಮೂರು ಫೀಟ್ ಎತ್ತರದ ತಡೆಗೋಡೆ ದಾಟಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಸಮಯ್ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವನು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old Medical student accidently falls from 5th floor of appartment building at Shivabagh in Mangalore. The deceased has been identified as Samay Shetty.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm