ಬ್ರೇಕಿಂಗ್ ನ್ಯೂಸ್
31-07-23 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ರಸ್ತೆ ನಡುವಿನ ಹೊಂಡ ತಪ್ಪಿಸಲು ಯತ್ನಿಸಿ, ಬೈಕ್ ಸವಾರನೊಬ್ಬ ನಿಂತಿದ್ದ ಓಮ್ನಿ ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ಸಂಭವಿಸಿದೆ.
ಕೋಡಿಕಲ್ ನಿವಾಸಿ, ನಗರದ ಸಂತ ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿ ಅಂಕಿತ್ ಜಿ.(21) ಮೃತಪಟ್ಟ ಯುವಕ. ಅಂಕಿತ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ತಂದೆ, ತಾಯಿ ಮತ್ತು ಅಣ್ಣನನ್ನು ಅಗಲಿದ್ದಾರೆ.

ಭಾನುವಾರ ರಾತ್ರಿ 10.30ರ ವೇಳೆಗೆ ಅಂಕಿತ್ ತನ್ನ ಗೆಳೆಯ ಆರ್ಯನ್ ಅವರನ್ನು ಕುಲಶೇಖರದಲ್ಲಿರುವ ಅವರ ಮನೆಗೆ ಬಿಟ್ಟು ಕೋಡಿಕಲ್ ಕಡೆಗೆ ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಬಿಕರ್ನಕಟ್ಟೆಯ ಮಸೀದಿ ಎದುರು ರಸ್ತೆ ಹೊಂಡ ತಪ್ಪಿಸಲು ಯತ್ನಿಸಿ ರಸ್ತೆ ಬದಿ ನಿಲ್ಲಿಸಿದ್ದ ಆಮ್ನಿ ಕಾರಿನ ಹಿಂಬದಿಗೆ ಢಿಕ್ಕಿಯಾಗಿತ್ತು. ಅಂಕಿತ್ ಬೈಕ್ನಿಂದ ಚರಂಡಿಗೆ ಬಿದ್ದು ಗಾಯಗೊಂಡಿದ್ದರೆ, ಬೈಕ್ ಪಲ್ಟಿಯಾಗಿ ರಸ್ತೆ ಪಕ್ಕದ ನರ್ಸರಿಯ ಗೇಟಿಗೆ ಡಿಕ್ಕಿ ಹೊಡೆದು ನಿಂತಿತ್ತು. ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಅಂಕಿತ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲೇ ಅಂಕಿತ್ ಮೃತಪಟ್ಟಿದ್ದರು. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 18ರಂದು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಪೆಟ್ರೋಲ್ ಪಂಪ್ ಸಮೀಪ ಹೊಂಡ ತಪ್ಪಿಸಲು ಯತ್ನಿಸಿದ್ದ ದ್ವಿಚಕ್ರ ಸವಾರನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದ ಘಟನೆ ನಡೆದಿತ್ತು. ಮಂಗಳೂರಿನಲ್ಲಿ ರಸ್ತೆ ಹೊಂಡದ ಕಾರಣಕ್ಕೆ ಎರಡನೇ ಬಲಿಯಾಗಿದೆ.
Mangalore Pothole Accident, 21 year old boy dies in order to avoid pothole at Bikarnakatte. The deceased has been identified as Ankith G. The accident happened at 10:30 night on Sunday. A bike rider was killed as he lost control over the bike he was riding in a bid to avoid a pothole and crashed into a parked van late night on Sunday July 30 near Infant Jesus Church entrance opposite Pramod Nursery.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm