ಬ್ರೇಕಿಂಗ್ ನ್ಯೂಸ್
01-08-23 01:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಭಾರೀ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಆಗ್ರಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಉತ್ತರ ನೀಡಿದ್ದಾರೆ.
ಮರು ತನಿಖೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಸೌಜನ್ಯಾ ಕೇಸನ್ನು ಈಗಾಗಲೇ ಸಿಬಿಐಗೆ ಕೊಡಲಾಗಿತ್ತು. ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸೌಜನ್ಯ ಹೆತ್ತವರು ಮರು ತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕು ಅಂತ ನೋಡಬೇಕಾಗತ್ತೆ. ನ್ಯಾಯಾಲಯಕ್ಕೆ ಮತ್ತೆ ಅಪೀಲು ಹಾಕಬೇಕಾಗುತ್ತೆ. ತೀರ್ಪು ಏನಿದೆ ಅಂತ ನೋಡಿದ ಮೇಲೆ ನಿರ್ಧಾರ ಮಾಡ್ತೀವಿ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ಖಚಿತ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಅಥವ ಯಾರ ವಿರುದ್ಧವೂ ಅವಹೇಳನ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೀಕೆ ಮಾಡಿದರೂ ಕ್ರಮ ತಗೋತೀರಾ ಎಂದು ಕೇಳಿದ್ದಕ್ಕೆ, ಟೀಕೆ ಮಾಡಿದರೆ ಕ್ರಮ ಅಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಮಾತ್ರ ಕ್ರಮ. ಟೀಕೆ ಬೇರೆ, ಸುಳ್ಳು ಸುದ್ದಿ , ವೈಯಕ್ತಿಕ ತೇಜೋವಧೆ ಮಾಡೋದು ಬೇರೆ. ಕುಟುಂಬದ ಬಗ್ಗೆ ಅವಹೇಳನ ಮಾಡಿದ್ರೆ ನೀವು ಬಿಡ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಕಸ್ತೂರಿರಂಗನ್ ವರದಿ ಜಾರಿ ಮಾಡ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ತೀರ್ಮಾನ ಮಾಡಬೇಕಿರೋದು ಕೇಂದ್ರ ಸರ್ಕಾರ. ವರದಿ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತಗೋಬೇಕು. ಹಾಗಂತ ನಾವು ಪರಿಸರ ರಕ್ಷಣೆಗೆ ಹಿಂದೆ ಬೀಳಲ್ಲ ಎಂದರು.
ಬಿಟ್ ಕಾಯಿನ್ ತನಿಖೆ ಏನಾಯ್ತು ಎಂಬ ಪ್ರಶ್ನೆಗೆ, ಈಗಾಗಲೇ ಎಸ್ಐಟಿ ಮಾಡಿದ್ದೇವೆ, ಅವರು ತನಿಖೆ ಮಾಡಲಿದ್ದಾರೆ ಎಂದರು. ತಿಂಗಳು ಕಳೆದರೂ ಆರೋಪಿಗಳಿಗೆ ನೋಟೀಸ್ ಕೊಟ್ಟಿಲ್ಲ ಯಾಕೆಂಬ ಪ್ರಶ್ನೆಗೆ, ನೋಡೋಣ ಮಾತಾಡ್ತೀನಿ. ಅದು ತನಿಖಾ ತಂಡದ ಕೆಲಸ ಎಂದು ಮುಖ್ಯಮಂತ್ರಿ ಜಾರಿಕೊಂಡರು.
Soujanya case judgement copy yet to be read says CM Siddaramaiah in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm