ಬ್ರೇಕಿಂಗ್ ನ್ಯೂಸ್
01-08-23 01:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಭಾರೀ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಆಗ್ರಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಉತ್ತರ ನೀಡಿದ್ದಾರೆ.
ಮರು ತನಿಖೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಸೌಜನ್ಯಾ ಕೇಸನ್ನು ಈಗಾಗಲೇ ಸಿಬಿಐಗೆ ಕೊಡಲಾಗಿತ್ತು. ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸೌಜನ್ಯ ಹೆತ್ತವರು ಮರು ತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕು ಅಂತ ನೋಡಬೇಕಾಗತ್ತೆ. ನ್ಯಾಯಾಲಯಕ್ಕೆ ಮತ್ತೆ ಅಪೀಲು ಹಾಕಬೇಕಾಗುತ್ತೆ. ತೀರ್ಪು ಏನಿದೆ ಅಂತ ನೋಡಿದ ಮೇಲೆ ನಿರ್ಧಾರ ಮಾಡ್ತೀವಿ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ಖಚಿತ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಅಥವ ಯಾರ ವಿರುದ್ಧವೂ ಅವಹೇಳನ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೀಕೆ ಮಾಡಿದರೂ ಕ್ರಮ ತಗೋತೀರಾ ಎಂದು ಕೇಳಿದ್ದಕ್ಕೆ, ಟೀಕೆ ಮಾಡಿದರೆ ಕ್ರಮ ಅಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಮಾತ್ರ ಕ್ರಮ. ಟೀಕೆ ಬೇರೆ, ಸುಳ್ಳು ಸುದ್ದಿ , ವೈಯಕ್ತಿಕ ತೇಜೋವಧೆ ಮಾಡೋದು ಬೇರೆ. ಕುಟುಂಬದ ಬಗ್ಗೆ ಅವಹೇಳನ ಮಾಡಿದ್ರೆ ನೀವು ಬಿಡ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಕಸ್ತೂರಿರಂಗನ್ ವರದಿ ಜಾರಿ ಮಾಡ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ತೀರ್ಮಾನ ಮಾಡಬೇಕಿರೋದು ಕೇಂದ್ರ ಸರ್ಕಾರ. ವರದಿ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತಗೋಬೇಕು. ಹಾಗಂತ ನಾವು ಪರಿಸರ ರಕ್ಷಣೆಗೆ ಹಿಂದೆ ಬೀಳಲ್ಲ ಎಂದರು.
ಬಿಟ್ ಕಾಯಿನ್ ತನಿಖೆ ಏನಾಯ್ತು ಎಂಬ ಪ್ರಶ್ನೆಗೆ, ಈಗಾಗಲೇ ಎಸ್ಐಟಿ ಮಾಡಿದ್ದೇವೆ, ಅವರು ತನಿಖೆ ಮಾಡಲಿದ್ದಾರೆ ಎಂದರು. ತಿಂಗಳು ಕಳೆದರೂ ಆರೋಪಿಗಳಿಗೆ ನೋಟೀಸ್ ಕೊಟ್ಟಿಲ್ಲ ಯಾಕೆಂಬ ಪ್ರಶ್ನೆಗೆ, ನೋಡೋಣ ಮಾತಾಡ್ತೀನಿ. ಅದು ತನಿಖಾ ತಂಡದ ಕೆಲಸ ಎಂದು ಮುಖ್ಯಮಂತ್ರಿ ಜಾರಿಕೊಂಡರು.
Soujanya case judgement copy yet to be read says CM Siddaramaiah in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm