ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.

ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.

ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm