ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.

ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.

ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm