ಬ್ರೇಕಿಂಗ್ ನ್ಯೂಸ್
01-08-23 07:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಕರಾವಳಿ ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ. ಬೇರೆ ಕಡೆಯ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಪಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಆಡ್ಮಿಷನ್ ಆಗಿದೆ, ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಎಂದು ಹೇಳಿದ್ದರು. ಅಂತಹ ವಾತಾವರಣ ಇಲ್ಲ. ಹಾಗೇನು ಭಯ ಪಡಬೇಡಿ ಅಂತ ವಿದ್ಯಾರ್ಥಿಗಳನ್ನು ಹೇಳಿ. ಕಳುಹಿಸಿದ್ದೆ ಎಂದು ಹೇಳಿದ ಗುಂಡೂರಾವ್, ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸಾಥ್ ನೀಡುತ್ತಿವೆ. ನಮ್ಮ ಸರ್ಕಾರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ.
ಇದನ್ನು ನೈತಿಕ ಪೊಲೀಸ್ ಅಲ್ಲ, ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಟಿಸೋದು, ದಬ್ಬಾಳಿಕೆ ನಡೆಸೋದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ ಈ ರೀತಿಯ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ.
ಇಂತಹವರಿಗೆ ಬಿಜೆಪಿ ಶಾಸಕರು ಬೆಂಬಲ ನೀಡುತ್ತಾರೆ ಅಂದ್ರೆ, ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರ್ಥ. ಬಿಜೆಪಿಗೆ ದ.ಕ. ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ ಅಂತ ಕಾಣುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮಂಗಳೂರಿಗೆ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದ ಬಳಿಕ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
District-in-charge minister Dinesh Gundu Rao said that several communal forces including Sangh Parivar organisations are deliberately conspiring to bring a bad name to the Dakshina Kannada district.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm