ಬ್ರೇಕಿಂಗ್ ನ್ಯೂಸ್
02-08-23 09:15 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 2: ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರು ನಾಪತ್ತೆಯಾಗಿದ್ದಾರೆ. ಒಬ್ಬ ಮಹಿಳೆ ಮಗುವಿನ ಜೊತೆ ದೇವಸ್ಥಾನಕ್ಕೆ ಬಂದು ನಾಪತ್ತೆಯಾಗಿದ್ದರೆ ಮತ್ತೊಬ್ಬರು ದಂತ ಚಿಕಿತ್ಸೆಗೆಂದು ಹೋದವರು ಮರಳಿ ಮನೆ ಸೇರಿಲ್ಲ.
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ದೇವಸ್ಯದ ನಿವಾಸಿ ಮಾಯಿಲಪ್ಪ ಅವರ ಪುತ್ರಿ ತೀರ್ಥಲತಾ ಎಂಬವರನ್ನು ಗದಗ ಮೂಲದ ಶಿವರಾಜ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಇತ್ತೀಚೆಗೆ ಮನೆಗೆ ಬಂದ ತೀರ್ಥಲತಾ ಜುಲೈ 31ರಂದು ಹಲ್ಲು ನೋವಿನ ಕಾರಣದಿಂದ ದಂತ ವೈದ್ಯರ ಬಳಿ ಚಿಕಿತ್ಸೆಗೆಂದು ಹೋದವರು ಮನೆಗೆ ವಾಪಸಾಗಿಲ್ಲ. ಸಾಕಷ್ಟು ಹುಡುಕಾಟ ನಡೆಸಿದ್ರೂ ತೀರ್ಥಲತಾ ಕಾಣದ ಕಾರಣದಿಂದ ಅವರ ತಂದೆ ಮಾಯಿಲಪ್ಪ ಗೌಡ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಮಹಿಳೆ ಮಗುವಿನೊಂದಿಗೆ ಮಿಸ್ಸಿಂಗ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಶೇಖರ್ ಎಂಬವರು ತನ್ನ ಪತ್ನಿ ಹರ್ಷಿತಾ ಮತ್ತು ಮೂರು ವರ್ಷ ಪ್ರಾಯದ ಮಗು ಭರತ್ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ದೇವರ ದರ್ಶನದ ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿದ್ದು ಅಲ್ಲಿದ್ದಾಗ ಪತ್ನಿ ಹಾಗೂ ಮಗು ಕಾಣೆಯಾಗಿದ್ದಾಗಿ ದೂರು ನೀಡಿದ್ದಾರೆ. ಎಲ್ಲ ಕಡೆ ಹುಡುಕಾಡಿದರೂ ಪತ್ನಿ ಹಾಗೂ ಮಗು ಸಿಗದ ಕಾರಣ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಜಶೇಖರ್ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸ್ನೇಹಿತರ ಕುಟುಂಬದ ಜತೆ ಧರ್ಮಸ್ಥಳಕ್ಕೆ ಬಂದಿದ್ದು ಆಗಸ್ಟ್ 1ರಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸುಬ್ರಹ್ಮಣ್ಯ ತಲುಪಿದ್ದರು. ದೇವರ ದರ್ಶನ ಮುಗಿಸಿ ಮಧ್ಯಾಹ್ನ ಹೊತ್ತಿಗೆ ಖರೀದಿಗೆಂದು ತೆರಳಿದ್ದರು. ಈ ವೇಳೆ, ಹರ್ಷಿತಾ ಮತ್ತು ಮಗು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಬಸ್ ನಿಲ್ದಾಣ, ದೇವಸ್ಥಾನದ ಆವರಣದ ಅಂಗಡಿಗಳಲ್ಲಿ ಹಾಗೂ ಕ್ಷೇತ್ರದ ಪ್ರಮುಖ ಸ್ಥಳದ ಸಿಸಿ ಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
Two women go missing after visiting Kukke Subramanya Temple in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm