ಬ್ರೇಕಿಂಗ್ ನ್ಯೂಸ್
03-08-23 05:56 pm Mangalore Correspondent ಕರಾವಳಿ
ಉಳ್ಳಾಲ, ಆ.3: ನಗರದ ಕದ್ರಿ ಕೆಪಿಟಿಯಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡೇ ದಿನಕ್ಕೆ ಪೋಷಕರು ಪಾಕೆಟ್ ಮನಿ ಕೊಟ್ಟಿಲ್ಲವೆಂದು ಮುನಿಸಿಕೊಂಡ ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಸ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರ ನಿವಾಸಿಗಳಾದ ಭಾಸ್ಕರ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಶಾಂತ್ ಪ್ರಥಮ ಪಿಯುಸಿಯನ್ನು ಪಂಪ್ವೆಲ್ ಕಪಿತಾನಿಯೋ ಕಾಲೇಜಿನಲ್ಲಿ ಮುಗಿಸಿದ್ದ. ಆನಂತರ ಕದ್ರಿ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಪೋಷಕರು ನಿನ್ನೆ 500 ರೂಪಾಯಿ ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡು ಮನೆಯಲ್ಲೇ ಉಳಿದುಕೊಂಡಿದ್ದ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗಿನ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ಏಕೈಕ ಸಹೋದರಿಯನ್ನ ಅಗಲಿದ್ದು ಆತನ ತಂದೆ ಭಾಸ್ಕರ್ ಕೂಲಿ ಕೆಲಸ ಮಾಡುತ್ತಿದ್ದಾರೆ.
ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
17 year old student commit suicide for not giving pocket money at Kuthar in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm