ಬ್ರೇಕಿಂಗ್ ನ್ಯೂಸ್
08-08-23 04:08 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕರುನಾಡಿನ ಜಾನಪದ ಕ್ರೀಡೆ ಕಂಬಳವನ್ನು ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಆಯೋಜಿಸಬೇಕೆಂಬ ಹಲವು ವರ್ಷದ ಕನಸೊಂದು ನನಸಾಗುವ ಹಂತಕ್ಕೆ ಬಂದಿದ್ದು, ಈ ಮೂಲಕ ಕಂಬಳ ಕ್ಷೇತ್ರದಲ್ಲಿ ಹೊಸ ಇತಿಹಾಸವೊಂದು ಸೃಷ್ಟಿಯಾಗಲಿದೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ಕಂಬಳ ಕರೆಗೆ ರಾಜ ಮಹಾರಾಜ 'ಜಯಚಾಮರಾಜೇಂದ್ರ ಒಡೆಯರ್ ಜೋಡುಕರೆ ಕಂಬಳ' ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಕಂಬಳ ಕ್ರೀಡೆ ಸಾಮಾನ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ನಡೆಯುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕಂಬಳ ಕ್ರೀಡೆ ಹೊಸ ಹಿರಿಮೆಯನ್ನು ಪಡೆದುಕೊಂಡಿದ್ದು, ಹೊರ ಜಿಲ್ಲೆ, ಹೊರರಾಜ್ಯ, ದೇಶ-ವಿದೇಶಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.
ಪೇಟಾ ಸಂಸ್ಥೆ ಕಂಬಳ ಕ್ರೀಡೆಗೆ ವಿರೋಧವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ನಿಷೇಧವಾದ ಸಂದರ್ಭ ಇಡೀ ಕರುನಾಡು ಮಾತ್ರವಲ್ಲದೆ ದೇಶಾದ್ಯಂತ ಕಂಬಳ ಪರ ಹೋರಾಟ ವ್ಯಕ್ತವಾಯಿತು. ಇದಾದ ಬಳಿಕ ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಸುಪ್ರೀಂ ಕೋರ್ಟ್ ಕೂಡಾ ಪೇಟಾ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಮೂಲಕ ಕಂಬಳ ಕ್ರೀಡೆಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಸುಮಾರು 3 ವರ್ಷಗಳಿಂದ ಕಂಬಳ ಕ್ರೀಡೆಯನ್ನು ರಾಜ್ಯ ರಾಜ್ಯಧಾನಿಯಲ್ಲಿ ಆಯೋಜಿಸಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಅದಕ್ಕೆ ಈಗ ಕಾಲಕೂಡಿ ಬಂದಿದೆ.
ಬೆಂಗಳೂರು ತುಳು ಕೂಟ ಈ ಬಾರಿ ಸುವರ್ಣ ಸಂಭ್ರಮದಲ್ಲಿದ್ದು, ಇದರ ಸವಿ ನೆನಪಿಗಾಗಿ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ. ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ರೂವಾರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಿದ್ಧತೆ ನಡೆಯುತ್ತಿದೆ. ಮೈಸೂರಿನ ಒಡೆಯರ್ ಕುಟುಂಬಕ್ಕೆ ಸಂಬಂಧಪಟ್ಟ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೆ ಮೈಸೂರು ರಾಜಮನೆತನದಿಂದ ಅನುಮತಿ ಸಿಕ್ಕಿದ್ದು, ಸಮಿತಿಯು ಈಗಾಗಲೇ ಎರಡು ಸುತ್ತಿನ ಸಭೆ ನಡೆದಿದೆ. ಕಂಬಳಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದ್ದು, ಸರಕಾರಿ ಮಟ್ಟದಲ್ಲಿಅನುಮತಿ ಸಿಗಲು ಬಾಕಿಯಿದೆ. ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿಯಾಗುವುದಾಗಿ ಸಮಿತಿ ತಿಳಿಸಿದೆ.
ಅಂತಿಮ 8 ಸುತ್ತಿನ ಕೋಣಗಳು:
ಕಂಬಳದ ಎಲ್ಲ ವಿಭಾಗದ ಸ್ಪರ್ಧೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕಳೆದ ಬಾರಿ ಅಂತಿಮ 8 ಸುತ್ತಿನಲ್ಲಿ ಸ್ಪರ್ಧಿಸಿದ ಕೋಣಗಳಿಗೆ ಪ್ರಥಮ ಪ್ರಾಶಸ್ತ್ಯದಲ್ಲಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಕೋಣದ ಯಜಮಾನರು, ಕಂಬಳ ಸಮಿತಿ, ಕಂಬಳ ಸಂಘಟಕರ ಜತೆ ಮಾತನಾಡಿ ಸಹಕಾರ ಕೋರಲಾಗುವುದು. ಕೋಣಗಳನ್ನು ರೈಲಿನಲ್ಲಿ ಸಾಗಾಟ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ನಮ್ಮ ಕಂಬಳ ಹಿರಿಮೆಯನ್ನು ರಾಜ್ಯ, ದೇಶಕ್ಕೆ ಪರಿಚಯಿಸುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಆಯೋಜಿಸುವ ಉದ್ದೇಶ ಹೊಂದಿದ್ದು, ನಮ್ಮ ರಾಜ್ಯಕ್ಕೆ ಅನನ್ಯ ಕೊಡುಗೆ ನೀಡಿದ ಮೈಸೂರು ಒಡೆಯರ ಹೆಸರನ್ನೇ ಐತಿಹಾಸಿಕ ಕಂಬಳ ಕರೆಗೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ತುಳುನಾಡಿನ ಆಹಾರ, ಸಂಸ್ಕೃತಿ-ಆಚಾರ ವಿಚಾರವನ್ನು ಪರಿಚಯಿಸುವ ಕೆಲಸವೂ ಆಗಲಿದೆ ಎಂದು ಪುತ್ತೂರು ಶಾಸಕ ಅಶೋಖ್ ರೈ ತಿಳಿಸಿದ್ದಾರೆ.
Kambala to be held first time in Bangalore by Tulu Koota.Popular Janapada sport of the state, ‘Kambala’ will be held at Bengaluru Palace Grounds in November this year. Kambala sport has been planned in order to spread its glory in the state and all over the country on the eve of golden jubilee of Tulu Koota.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm