ಬ್ರೇಕಿಂಗ್ ನ್ಯೂಸ್
09-08-23 03:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಮನೆಯ ಕಪಾಟಿನಲ್ಲಿರಿಸಿದ್ದ ಚಿನ್ನಾಭರಣವನ್ನು ಪತಿಯೇ ಕಳವುಗೈದು ಮಾರಾಟ ಮಾಡಿದ್ದಾರೆಂದು ಪತ್ನಿಯೇ ನಗರದ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪತಿ ಇಲ್ಯಾಸ್ ಮತ್ತು ಪ್ರಭಾಕರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪತಿ ಮತ್ತು ಪತ್ನಿ ನಡುವೆ ಕೆಲವು ತಿಂಗಳಿನಿಂದ ವಿರಸ ಉಂಟಾಗಿದ್ದು ಇತ್ತೀಚೆಗೆ ಎಪ್ರಿಲ್ ತಿಂಗಳಲ್ಲಿ ಜಗಳ ನಡೆದು ಪತ್ನಿ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದರು. ಗಂಡನ ಮನೆ ಕದ್ರಿ ಕೆಪಿಟಿ ಬಳಿಯ ಆಶಿಯಾನ ಅಪಾರ್ಟ್ಮೆಂಟ್ ನಲ್ಲಿತ್ತು. ಆದರೆ, ಮದುವೆಯ ಸಂದರ್ಭದಲ್ಲಿ ತಾಯಿ ಮನೆಯಿಂದ ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದ ಚಿನ್ನಾಭರಣವನ್ನು ಫ್ಲಾಟಿನ ಕಪಾಟಿನಲ್ಲೇ ಇರಿಸಿದ್ದರು. ಒಟ್ಟು 75 ಪವನ್ ಚಿನ್ನವಿದ್ದು, ಈ ವಿಷಯ ಮಹಿಳೆ ಮತ್ತು ಅವರ ಗಂಡನಾದ ಇಲಿಯಾಸ್ಗೆ ಮಾತ್ರ ತಿಳಿದಿತ್ತು.
ಇತ್ತೀಚೆಗೆ ಫ್ಲ್ಯಾಟ್ಗೆ ಹೋಗಿ ವಾಚ್ಮ್ಯಾನ್ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್ಗೆ ಬಂದಿಲ್ಲ ಎಂದು ತಿಳಿಸಿದ್ದರು. ಮಹಿಳೆ ಅನುಮಾನಗೊಂಡು ಮನೆಯೊಳಗೆ ಹೋಗಿ ಬಂಗಾರವಿಟ್ಟ ಕಪಾಟಿನಲ್ಲಿ ನೋಡಿದಾಗ ಲಾಕರ್ ಸಮೇತ ಚಿನ್ನ ಮಾಯವಾಗಿತ್ತು. ಗಂಡನಿಗೆ ಕರೆ ಮಾಡಿದಾಗ 'ನಾನು ಲಾಕರ್ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನೀನು ಏನ್ಮಾಡ್ತೀಯಾ ಎಂದು ದಮ್ಕಿ ಹಾಕಿದ್ದ. ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದಿದ್ದಾಗಿ ಹೇಳಿದ್ದ. ಅದಕ್ಕೆ ಬಡ್ಡಿ ಕಟ್ಟಲಾಗದೇ ಪ್ರಭಾಕರ್ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಹೇಳಿರುವುದಾಗಿ ತಿಳಿಸಿದ್ದ.
ಅಡವಿಟ್ಟ ಚಿನ್ನದ ಬಗ್ಗೆ ಬ್ಯಾಂಕಿನಲ್ಲಿ ಪರಿಶೀಲನೆ ನಡೆಸಿದಾಗ, ಪ್ರಭಾಕರ್ ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಚಿನ್ನ ಕಳಕೊಂಡ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
A wife has filed a complaint with the police against her husband for stealing 75 grams of gold that was kept in a locker. Renisha Noronha is the complainant and her husband Mohammed Ilyas is the accused.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm