ಬ್ರೇಕಿಂಗ್ ನ್ಯೂಸ್
10-08-23 08:24 pm Mangalore Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿ ಎಸ್ಡಿಪಿಐಯೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ನಡೆಸಿದ್ದು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಸಮಬಲದ ಪೈಪೋಟಿಯಲ್ಲಿ ಟಾಸ್ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಗ್ರಾಮ ಪಂಚಾಯತ್ ನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಎಸ್ಡಿಪಿಐ ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಬಿಜೆಪಿ ಸದಸ್ಯರು ಎಸ್ಡಿಪಿಐ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಸಮಬಲ ಮತ ಪಡೆದುಕೊಂಡಿದ್ದಾರೆ. ನಂತರ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಚೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.
ಪಂಚಾಯತ್ ನಲ್ಲಿ ಬಿಜೆಪಿ ಪೂರ್ಣ ಬಹುಮತ ಹೊಂದಿದ್ದರೂ, ಇಬ್ಬರು ಸದಸ್ಯರು ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪಕ್ಷವನ್ನು ಮುಖಭಂಗಕ್ಕೀಡು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸತ್ಯರಾಜ್ ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ವಿರೋಧಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ನಿರಾಶೆಗೊಂಡಿದ್ದಾರೆ. ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
Mangalore Bjp ties up with enemy party SDPI for Talapdy gram Panchyath elections, President post to SDPI.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm