ಬ್ರೇಕಿಂಗ್ ನ್ಯೂಸ್
10-08-23 08:24 pm Mangalore Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿ ಎಸ್ಡಿಪಿಐಯೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ನಡೆಸಿದ್ದು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಸಮಬಲದ ಪೈಪೋಟಿಯಲ್ಲಿ ಟಾಸ್ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಗ್ರಾಮ ಪಂಚಾಯತ್ ನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತರು ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು ಎಸ್ ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಎಸ್ಡಿಪಿಐ ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಇಬ್ಬರು ಬಿಜೆಪಿ ಸದಸ್ಯರು ಎಸ್ಡಿಪಿಐ ಅಭ್ಯರ್ಥಿ ಪರ ಮತ ಚಲಾಯಿಸಿದ್ದರಿಂದ ಸಮಬಲ ಮತ ಪಡೆದುಕೊಂಡಿದ್ದಾರೆ. ನಂತರ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಚೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.
ಪಂಚಾಯತ್ ನಲ್ಲಿ ಬಿಜೆಪಿ ಪೂರ್ಣ ಬಹುಮತ ಹೊಂದಿದ್ದರೂ, ಇಬ್ಬರು ಸದಸ್ಯರು ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಪಕ್ಷವನ್ನು ಮುಖಭಂಗಕ್ಕೀಡು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸತ್ಯರಾಜ್ ಗೆಲ್ಲುವ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಹೂಹಾರಗಳನ್ನು ತಂದಿದ್ದರೂ, ಸ್ವಂತ ಪಕ್ಷದವರೇ ವಿರೋಧಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ನಿರಾಶೆಗೊಂಡಿದ್ದಾರೆ. ಮೊದಲ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಶೆಟ್ಟಿ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಭಾಗವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಕೇಶವ ಉಪಸ್ಥಿತರಿದ್ದರು.
Mangalore Bjp ties up with enemy party SDPI for Talapdy gram Panchyath elections, President post to SDPI.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm