ಬ್ರೇಕಿಂಗ್ ನ್ಯೂಸ್
10-08-23 10:21 pm Mangalore Correspondent ಕರಾವಳಿ
ಉಡುಪಿ, ಆಗಸ್ಟ್ 10: 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಜೊತೆಗೆ ಮಹಿಳೆಯೊಬ್ಬರ ಜೊತೆಗೆ ಸಂಬಂಧ ಇದೆಯೆಂದು ವದಂತಿ ಹಬ್ಬಿತ್ತು. ಅಲ್ಲದೆ, ಆರೋಪಿತ ಮಹಿಳೆಯ ಫೋಟೋವನ್ನು ಕೆಲವು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿತ್ತು. ಗಂಡನೇ ತನ್ನ ಪತ್ನಿ ಜೊತೆಗೆ ಸಂಸದರು ಸಂಬಂಧ ಇಟ್ಟುಕೊಂಡಿದ್ದಾರೆಂದು ಹೇಳಿಕೆ ನೀಡಿದ್ದರಿಂದ ಸುದ್ದಿಗೆ ರೆಕ್ಕೆ ಪುಕ್ಕ ಬಂದಿತ್ತು. ಘಟನೆ ಬಗ್ಗೆ ಸಂತ್ರಸ್ತ ಮಹಿಳೆ ತನ್ನ ವಿರುದ್ಧ ಕೆಲವರು ಸೇರಿ ತೇಜೋವಧೆ ಮಾಡಿದ್ದಾರೆಂದು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಮಂಗಳೂರಿನ ವಕೀಲ ರಾಘವೇಂದ್ರ ರಾವ್ ಮತ್ತು ಸತೀಶ್ ಶೆಟ್ಟಿ ಎಂಬವರು ಆರೋಪಿಗಳಾಗಿದ್ದರು. ಇದೀಗ ತಮ್ಮ ಮೇಲಿನ ಪ್ರಕರಣ ರದ್ದು ಪಡಿಸಬೇಕೆಂದು ರಾಘವೇಂದ್ರ ರಾವ್, ಉಡುಪಿ ಜಿಲ್ಲಾ ಸೆಷನ್ಸ್ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಸಕಾರಣ ಇಲ್ಲದಿದ್ದರೂ ದುರುದ್ದೇಶದಿಂದ ಚಾರ್ಜ್ ಶೀಟ್ ಹಾಕಲಾಗಿದೆ. ವಾಟ್ಸಪ್ ಮೆಸೇಜ್ ಆಧಾರದಲ್ಲಿ ತನ್ನ ಮೇಲೆ ಆರೋಪ ಹೊರಿಸಿದ್ದು ಸರಿಯಲ್ಲ ಇತ್ಯಾದಿ ಕಾರಣಗಳನ್ನು ಮುಂದಿಟ್ಟು ತನ್ನ ವಿರುದ್ಧದ ಕೇಸು ವಜಾಗೊಳಿಸುವಂತೆ ರಾಘವೇಂದ್ರ ರಾವ್ ಅರ್ಜಿ ಹಾಕಿದ್ದರು.
ಆದರೆ ನೀಡಿರುವ ಕಾರಣಗಳನ್ನು ಮುಂದಿಟ್ಟು ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅಲ್ಲದೆ, ಕೆಳಗಿನ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವಾಗ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶಾಂತವೀರ ಶಿವಪ್ಪ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಮಾನಹಾನಿ ಸೇರಿದಂತೆ ಐಟಿ ಆಕ್ಟ್ ನಡಿ ಕೇಸು ದಾಖಲಾಗಿತ್ತು.
Nalin Kateel affair news, Mangalore Senior lawyer Raghavendra Rao application to cancel case rejected by Udupi court. Advocate Raghavendra Rao had made false propaganda of Nalin Kateel having affair with some other married women, after which the women filed a case in 2014.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm