ಬ್ರೇಕಿಂಗ್ ನ್ಯೂಸ್
11-08-23 09:22 pm Mangalore Correspondent ಕರಾವಳಿ
ಉಳ್ಳಾಲ, ಆ.11: ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಎಸ್ಡಿಪಿಐ ಗೆಲುವಿಗೆ ಕಾರಣರಾದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.
ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಝ್ ಮತ್ತು ಮಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಸೆ, ಆಮಿಷ, ಒತ್ತಡದಿಂದ ಅಡ್ಡ ಮತದಾನ ಮಾಡಿ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಆದರೂ ಅವರು ಪಕ್ಷಕ್ಕೆ ದ್ರೋಹ ಬಗೆದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಎಸ್ ಡಿಪಿಐಗೆ ಬೆಂಬಲ ನೀಡುವ ಅಗತ್ಯವೂ ಇಲ್ಲ. ಗ್ರಾಮ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ 'ಬಿ' ಮೀಸಲಾತಿ ಬಂದಿದ್ದು ಬಿಜೆಪಿಯಲ್ಲಿ ಪುಷ್ಪಲತಾ ಶೆಟ್ಟಿ ಮಾತ್ರ ಇದ್ದ ಕಾರಣ ಅವಿರೋಧವಾಗಿ ಉಪಾಧ್ಯಕ್ಷರಾಗಿದ್ದಾರೆ. ಎಸ್ ಡಿಪಿಐಗೆ ಬೆಂಬಲ, ಸಹಕಾರ ನೀಡಿಲ್ಲ, ಈ ಬಗ್ಗೆ ತಪ್ಪು ಸಂದೇಶ ಹೋಗಿದ್ದು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮುಖಂಡರಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪುಷ್ಪಲತಾ ಶೆಟ್ಟಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.
Talapady Gram Panchyath elections, two BJP Muslim supporters deatined from party for Supporting SDPI.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm