ಬ್ರೇಕಿಂಗ್ ನ್ಯೂಸ್
11-08-23 10:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಹಳೆಯಂಗಡಿ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ ವಿಚಾರ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿಗೆ ಕಾರಣವಾಗಿತ್ತು. ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ ಮಾತಿಗೆ ಮಾತು ಬೆಳೆಸಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸುವಂತಾಗಿತ್ತು.
ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ವಾರ್ಡ್ ಗಳಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಹಾಗೂ ಬಿಜೆಪಿ ಬೆಂಬಲಿತ 11 ಸದಸ್ಯರು ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿ ಎರಡು ಪಕ್ಷಗಳ ಬೆಂಬಲಿತರ ಸಮಬಲದಿಂದಾಗಿ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಧಿಕಾರ ಪಟ್ಟ ಒಲಿದು ಬಂದಿತ್ತು. ಈ ಬಾರಿ ಅಧ್ಯಕ್ಷ ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರೊಬ್ಬರು ಭ್ರಷ್ಟಾಚಾರ ಆರೋಪದ ಕಾರಣ ಸದಸ್ಯತ್ವ ರದ್ದುಗೊಂಡಿರುವುದು ಜಟಾಪಟಿಗೆ ಕಾರಣ.




ಕೋರ್ಟ್ ತೀರ್ಪಿನ ಪ್ರಕಾರ ಆ ಮಹಿಳೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ ಎಂಬುದು ಬಿಜೆಪಿ ನಾಯಕರು ವಾದಿಸಿದರೆ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂಬುದು ಕಾಂಗ್ರೆಸ್ ಕಾರ್ಯಕರ್ತರ ವಾದವಾಗಿತ್ತು. ಇದರಿಂದ ಚುನಾವಣೆ ನಡೆಸಲಾಗದೆ ಸ್ಥಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಜಮಾಯಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.




ಮಧ್ಯಾಹ್ನ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆದು 1 ಗಂಟೆಗೆ ಫಲಿತಾಂಶ ಬರಬೇಕಾಗಿದ್ದರೂ, ಸಂಜೆ 5 ಗಂಟೆ ವರೆಗೆ ಚುನಾವಣೆ ನಡೆದಿರಲಿಲ್ಲ. ನಂತರ ಚುನಾವಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಂಗ್ರೆಸ್ ಬೆಂಬಲಿತ ಮಹಿಳಾ ಸದಸ್ಯರನ್ನು ಹೊರಗಿಟ್ಟು, ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಬಿಜೆಪಿ ಬೆಂಬಲಿತ ಪೂರ್ಣಿಮಾ ಅಧ್ಯಕ್ಷರಾಗಿ ಮತ್ತು ಚಂದ್ರಿಕಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಇವರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದು ಕಾಂಗ್ರೆಸ್ ಬೆಂಬಲಿತರು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು. ಮಧ್ಯಾಹ್ನದಿಂದಲೇ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಿಥುನ್ ರೈ ಸ್ಥಳದಲ್ಲಿ ಇದ್ದುದರಿಂದ ಎರಡೂ ಕಡೆ ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಸೇರಿದ್ದರು. ಪರಿಸ್ಥಿತಿ ಬಿಗಾಡಾಯಿಸುವ ಲಕ್ಷಣ ಗೋಚರಿಸುತ್ತಿದಂತೆ ಪೋಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದು ಜನರನ್ನು ಚದುರಿಸಿದ್ದಾರೆ.
Fight between Congress and BJP near Haleyangadi panchyath over election's in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm