ಬ್ರೇಕಿಂಗ್ ನ್ಯೂಸ್
11-08-23 10:57 pm Mangalore Correspondent ಕರಾವಳಿ
ಉಳ್ಳಾಲ, ಆ.11: ಮಂಗಳೂರು ವಿವಿಯ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಳೆದ 34 ವರ್ಷಗಳಿಂದ(1989 ರಿಂದ) ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾದ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಪಿಎಚ್ಡಿ ಪದವಿ ಪಡೆದುಕೊಂಡಿದ್ದಾರೆ.
ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ, ಟಿಪ್ಪು- ಹೈದರಾಲಿ ಇತಿಹಾಸ ಕಥನ, ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್ ಆಂಡ್ ಹಿಸ್ಟರಿ, ಕೊಲೊನಿಯಲಿಸಂ ಆಂಡ್ ನ್ಯಾಷನಲಿಸಂ ಇನ್ ಮಾಡರ್ನ್ ಏಷಿಯಾ ಕೃತಿ ಸೇರಿದಂತೆ ಅನೇಕ ಅಮೂಲ್ಯ ಇತಿಹಾಸ ಗ್ರಂಥಗಳನ್ನು ಉದಯ್ ಬಾರ್ಕೂರು ಪ್ರಕಟಿಸಿದ್ದಾರೆ.
ಮೃತರು ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಉದಯ್ ಬಾರ್ಕೂರು ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Mangalore Univercity professor Uday Barkur (59) dies of heart attack.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm