ಬ್ರೇಕಿಂಗ್ ನ್ಯೂಸ್
11-08-23 10:57 pm Mangalore Correspondent ಕರಾವಳಿ
ಉಳ್ಳಾಲ, ಆ.11: ಮಂಗಳೂರು ವಿವಿಯ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಳೆದ 34 ವರ್ಷಗಳಿಂದ(1989 ರಿಂದ) ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
2017 ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾದ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಸೌತ್ ಇಂಡಿಯನ್ ಕಾಂಗ್ರೆಸ್, ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಡಾ.ಉದಯ ಕುಮಾರ್ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದರು. ಇತಿಹಾಸ ತಜ್ಞನಾಗಿ ಗುರುತಿಸಿದ್ದ ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಪಿಎಚ್ಡಿ ಪದವಿ ಪಡೆದುಕೊಂಡಿದ್ದಾರೆ.
ವಸಾಹತುಶಾಹಿ ಇತಿಹಾಸ ಚರಿತ್ರೆಯ ವಾಸ್ತವ, ಟಿಪ್ಪು- ಹೈದರಾಲಿ ಇತಿಹಾಸ ಕಥನ, ಹಿಸ್ಟರಿಯಾಗ್ರಫಿ ಆಫ್ ತುಳು ಕಲ್ಚರ್ ಆಂಡ್ ಹಿಸ್ಟರಿ, ಕೊಲೊನಿಯಲಿಸಂ ಆಂಡ್ ನ್ಯಾಷನಲಿಸಂ ಇನ್ ಮಾಡರ್ನ್ ಏಷಿಯಾ ಕೃತಿ ಸೇರಿದಂತೆ ಅನೇಕ ಅಮೂಲ್ಯ ಇತಿಹಾಸ ಗ್ರಂಥಗಳನ್ನು ಉದಯ್ ಬಾರ್ಕೂರು ಪ್ರಕಟಿಸಿದ್ದಾರೆ.
ಮೃತರು ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ನೆಹರೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಉದಯ್ ಬಾರ್ಕೂರು ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Mangalore Univercity professor Uday Barkur (59) dies of heart attack.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm