ಬ್ರೇಕಿಂಗ್ ನ್ಯೂಸ್
12-08-23 07:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸರಕಾರವನ್ನು ಟೀಕಿಸಿದೆ.
ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್ಐ ಆಗ್ರಹಿಸಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಮಾತ್ರವಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Mangalore DYFI salms at MESCOM for regular power cuts in the city after Gruha Jyothi being introduced in state.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am