ಬ್ರೇಕಿಂಗ್ ನ್ಯೂಸ್
12-08-23 07:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸರಕಾರವನ್ನು ಟೀಕಿಸಿದೆ.
ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್ಐ ಆಗ್ರಹಿಸಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಮಾತ್ರವಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Mangalore DYFI salms at MESCOM for regular power cuts in the city after Gruha Jyothi being introduced in state.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm