ಬ್ರೇಕಿಂಗ್ ನ್ಯೂಸ್
12-08-23 07:16 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎದ್ದಿರುವ ಹೋರಾಟದ ದನಿಗೆ ಶ್ರೀರಾಮ ಸೇನೆ ಕೈಜೋಡಿಸಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾ ಕುಟುಂಬಸ್ಥರ ಮನೆಗೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದು ಬೆಂಬಲ ಘೋಷಿಸಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಮಾತನಾಡಿದ ಅವರು, ಸೌಜನ್ಯಾ ಪರ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ನೀಡಬೇಕು. ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಸೌಜನ್ಯಾ ಕುಟುಂಬಸ್ಥರಿಗೂ ಸುರಕ್ಷತೆ ನೀಡಬೇಕು, ರಕ್ಷಣೆ ನೀಡಬೇಕು. ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಅವರಿಗೆ ಸುರಕ್ಷತೆ ನೀಡಬೇಕು ಎಂದು ಹೇಳಿದರು.

ರಾಜಕೀಯ ವ್ಯವಸ್ಥೆ, ರಾಜಕಾರಣಿಗಳು ಸಂಪೂರ್ಣ ಭ್ರಷ್ಟರಾಗಿದ್ದಾರೆ. ನ್ಯಾಯಕ್ಕಾಗಿ, ಪ್ರಾಮಾಣಿಕತೆಗಾಗಿ, ಮಾನವೀಯತೆಗಾಗಿ ಹೋರಾಟ ಅನ್ನುವುದು ರಾಜಕಾರಣಿಗಳಲ್ಲಿ ಇಲ್ಲ. ಸೌಜನ್ಯ ಪ್ರಕರಣದ ಪ್ರಮುಖ ಆರೋಪಿಯೇ ಪೊಲೀಸ್ ಇಲಾಖೆ. ಶಾಸಕರು, ರಾಜಕಾರಣಿಗಳು ಭ್ರಷ್ಟರಾಗಿದ್ದರಿಂದ ಅವರ ಹಿಡಿತದಲ್ಲಿರುವ ಪೊಲೀಸ್ ವ್ಯವಸ್ಥೆಯೂ ಭ್ರಷ್ಟವಾಗುತ್ತದೆ. ಸೌಜನ್ಯಾ ಪ್ರಕರಣದಲ್ಲಿ ಮುಗ್ಧ, ಅಮಾಯಕ ವ್ಯಕ್ತಿಯೊಬ್ಬನ ಸಿಲುಕಿಸಿ ಪೊಲೀಸರು ಬಲಿ ನೀಡಿದ್ದಾರೆ. ಪೊಲೀಸರೇ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಕೊಲೆಗೆಡುಕರಿಗೆ , ಅತ್ಯಾಚಾರಿಗಳಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ಯಾರ ಒತ್ತಡ ಇತ್ತು? ಯಾರನ್ನು ರಕ್ಷಣೆ ಮಾಡಿದ್ದೀರಿ? ಎಂಬುದು ಬಹಿರಂಗ ಆಗಬೇಕು. ಸೌಜನ್ಯಾ ಪರ ಹೋರಾಟದಲ್ಲಿ ಶ್ರೀರಾಮ ಸೇನೆ ಕೂಡ ಕೈ ಜೋಡಿಸಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Police department must give tight security to Mahesh Thimarodi and sowjanya's family says Pramod Muthalik meeting their family in Dharmasthala.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm