ಬ್ರೇಕಿಂಗ್ ನ್ಯೂಸ್
13-08-23 08:34 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಿಷೇಧಿತ ಪಿಎಫ್ಐ ಸಂಘಟನೆಗೆ ಫಂಡಿಂಗ್ ಮಾಡಿರುವ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಉಳ್ಳಾಲದ ಕಿನ್ಯಾ, ಮಂಗಳೂರು ಹೊರವಲಯದ ವಳಚ್ಚಿಲ್ ಪದವು ಮತ್ತು ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲದ ಕಿನ್ಯಾದಲ್ಲಿ ಕೇರಳದ ಮೂಲದ ಇಬ್ರಾಹಿಂ ಎಂಬ ಧಾರ್ಮಿಕ ಶಿಕ್ಷಕರೊಬ್ಬರ ಮನೆಗೆ ದಾಳಿ ನಡೆಸಿದ್ದು, ಮನೆಯಲ್ಲಿದ್ದ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ರಾಹಿಂ ಒಂದು ವರ್ಷದ ಹಿಂದೆ ಪಿಎಫ್ಐ ಸಂಘಟನೆ ನಿಷೇಧ ಬೆನ್ನಲ್ಲೇ ನಾಪತ್ತೆಯಾಗಿದ್ದರು. ನಿಷೇಧ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್ಐ ನಾಯಕರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧರಿಸಿ ಇಬ್ರಾಹಿಂ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದೀಗ ಆತನ ಮನೆಯಲ್ಲಿ ತಲಾಶ್ ನಡೆಸಿದ್ದಾರೆ.
ಪಿಎಫ್ಐ ಪರವಾಗಿ ಫಂಡಿಂಗ್ ನಡೆಸುತ್ತಿರುವ ಹವಾಲಾ ನೆಟ್ವರ್ಕ್ ನಲ್ಲಿ ಇಬ್ರಾಹಿಂ ಲಿಂಕ್ ಹೊಂದಿದ್ದಾನೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ವಳಚ್ಚಿಲ್ ಪದವು ನಿವಾಸಿ ಮುಸ್ತಾಕ್ ಮತ್ತು ಮೆಲ್ಕಾರ್ ನಲ್ಲಿ ಇಬ್ರಾಹಿಂ ನಂದಾವರ ಎಂಬವರ ಮನೆಗೂ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆ ಎಂಬ ಮಾಹಿತಿಗಳಿವೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ.
NIA riads three places of Mangalore in Ullal, Valachil and Melkar over PFI funding network. A regious teacher house was also raided by NIA at Ullal. The Raid was conducted suspecting Hawala Network.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm