ಬ್ರೇಕಿಂಗ್ ನ್ಯೂಸ್
06-11-20 06:25 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 06: ಕೊರೊನಾ ನಿರ್ಬಂಧಗಳ ನಡುವೆ ನಾಟಕ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬೇಕೆಂಬ ನಾಟಕ ಕಲಾವಿದರ ಸಂಘದ ಮನವಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಂದಿಸಿದ್ದಾರೆ. ಸರಕಾರದ ಮಾರ್ಗಸೂಚಿ ಅನ್ವಯ ನಾಟಕ ಆರಂಭಕ್ಕೆ ಅನುಮತಿ ನೀಡುವುದಾಗಿ ಹೇಳಿದ್ದಾರೆ.
ಕೊರೊನಾ ಕಾರಣದಿಂದ ಕಳೆದೊಂದು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಸ್ಕೃತಿಕ ಮತ್ತು ಜನಪದ ಕಾರ್ಯಕ್ರಮಗಳು ಸಂಪೂರ್ಣ ಸ್ಥಗಿತಗೊಂಡಿತ್ತು. ಹೀಗಾಗಿ ಕಲಾವಿದರಿಗೆ ದೈನಂದಿನ ಜೀವನ ಸಾಗಿಸಲು ಕಷ್ಟವಾಗಿತ್ತು. ಕರಾವಳಿ ಜಿಲ್ಲೆಯಲ್ಲಿ ಸುಮಾರು 50ಕ್ಕಿಂತಲೂ ಹೆಚ್ಚಿನ ವೃತ್ತಿಪರ ನಾಟಕ ತಂಡಗಳಿವೆ. ನಾಟಕಗಳಲ್ಲಿ ದುಡಿಯುವ ಹೆಚ್ಚಿನ ರಂಗ ಕಲಾವಿದರು ಕಲೆಯನ್ನೇ ಜೀವನದ ವೃತ್ತಿಯನ್ನಾಗಿಸಿದ್ದು, ಕಲಾವಿದರಿಗೆ ಬೇರೆ ಆದಾಯದ ಮೂಲಗಳಿರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾಟಕ ಕಲಾವಿದರ ಸಂಘವು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.



ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಸರಕಾರದ ಸುತ್ತೋಲೆಯಂತೆ ಎಲ್ಲಾ ವಿಧದ ಮನೋರಂಜನಾ ಕಾರ್ಯಕ್ರಮಗಳಿಗೆ ಷರತ್ತಿನ ಆಧಾರದಲ್ಲಿ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕರಾವಳಿ ಕರ್ನಾಟಕ ರಂಗ ಕಲಾವಿದರ ಸೇವಾ ಪರಿಷತ್ತು (ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆ) ಅಧ್ಯಕ್ಷ ಮೋಹನ್ ದಾಸ್ ಕೊಟ್ಟಾರಿ ತಿಳಿಸಿದ್ದಾರೆ.
ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಾಜೇಶ್ ಕಣ್ಣೂರು, ಗೌರವ ಸಲಹೆಗಾರ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಸ್ಥಾಪಕ ಸದಸ್ಯರು ರಮೇಶ್ ರೈ ಕುಕ್ಕುವಳ್ಳಿ, ಚಿದಾನಂದ ಅದ್ಯಪಾಡಿ, ನ್ಯಾಯವಾದಿ ಮೋಹನ್ ದಾಸ್ ರೈ, ಕೀತ್ ಪುರ್ತಾಡೊ, ಚಲನಚಿತ್ರ ನಿರ್ದೇಶಕ ವಿಶ್ವನಾಥ್ ಕೋಡಿಕಲ್ ಹಾಗೂ ನ್ಯಾಯವಾದಿ ರಿತೇಶ್ ಬಂಗೇರ ಉಪಸ್ಥಿತರಿದ್ದರು.
The Mangalore DC has given permission to hold Drama and Cultural Activities with certain guidelines here on Nov 6, 2020.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am