ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am