ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm