ಬ್ರೇಕಿಂಗ್ ನ್ಯೂಸ್
16-08-23 10:30 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 16: ಗೂಡ್ಸ್ ವಾಹನದಲ್ಲಿ ಮುಂಜಾನೆ 3 ಗಂಟೆ ವೇಳೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿದ್ದು ವಾಹನದಲ್ಲಿದ್ದ ನಾಲ್ವರ ಮೇಲೆ ಹಲ್ಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಗೂಡ್ಸ್ ವಾಹನದಲ್ಲಿ ಜಾನುವಾರು ಒಯ್ಯುತ್ತಿದ್ದಾಗ ಜಯಪ್ರಶಾಂತ, ಲಕ್ಷ್ಮೀಶ ಮತ್ತು ಇತರರು ಸೇರಿಕೊಂಡು ಮೂರು ಬೈಕ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಗೋವುಗಳನ್ನು ಒಯ್ಯುತ್ತಿದ್ದವರನ್ನು ಎಳೆದು ಹಾಕಿ ಬೇಸ್ ಬಾಲ್ ಬ್ಯಾಟ್ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೀಡಾದ ಮೂಸಾ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಮುಳಿಯ ಹಿಂದು ವ್ಯಕ್ತಿಯಿಂದಲೇ ನಾಲ್ಕು ಜಾನುವಾರುಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಂಘಟನೆ ಸದಸ್ಯರು ಮುಂಜಾನೆ ಹೊತ್ತಿಗೆ ಕೇರಳ ಗಡಿಭಾಗ ಬಾಕ್ರಬೈಲಿನ ಕಜೆ ಎಂಬಲ್ಲಿಗೆ ತರುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆನಂತರ, ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಬಾಕ್ರಬೈಲು ನಿವಾಸಿಗಳಾದ ಇಬ್ರಾಹಿಂ ಯಾನೆ ಮೋನು, ಮೂಸಾ, ಕನ್ಯಾನ ನಿವಾಸಿ ಹಮೀದ್ ಯಾನೆ ಜಲಾಲ್ ಎಂಬವರನ್ನು ಬಂಧಿಸಿದ್ದಾರೆ. ನಾಲ್ಕು ಜಾನುವಾರು, ಗೂಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಅಕ್ರಮ ಗೋಸಾಗಣೆ, ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಮೂಸಾ ಎಂಬವರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಇಬ್ಬರು ಹಿಂದು ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moral Policing at Vitla in Mangalore on cow vigilantes, Four arrested.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm