ಬ್ರೇಕಿಂಗ್ ನ್ಯೂಸ್
17-08-23 03:36 pm Mangalore Correspondent ಕರಾವಳಿ
ಉಳ್ಳಾಲ, ಆ.17: ವ್ಯಕ್ತಿಯೊಬ್ಬ ಆಹಾರದಲ್ಲಿ ವಿಷವಿಕ್ಕಿ ಸುಮಾರು 25 ನಾಯಿಗಳ ಮಾರಣ ಹೋಮ ನಡೆಸಿದ್ದಾನೆಂದು ಆರೋಪ ಕೇಳಿಬಂದಿದೆ. ವಿಷಾಹಾರ ಸೇವಿಸಿದ ಹಸುವೊಂದು ಸಾವನ್ನಪ್ಪಿದ್ದು ಕೃತ್ಯ ಎಸಗಿದವನ ಬಂಧನಕ್ಕೆ ಸ್ಥಳೀಯರು ಮತ್ತು ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ.
ತಲಪಾಡಿಯ ಅಲಂಕಾರಗುಡ್ಡೆ, ಭಂಡಾರಮನೆ ಬಳಿ ನಿವಾಸಿ ಅಮಿತ ಎಂಬವರು ಸಾಕುತ್ತಿದ್ದ ಹಸುವನ್ನು ವಿಷ ಪ್ರಾಷಣಗೈದು ಕೊಲ್ಲಲಾಗಿದೆ. ಸ್ಥಳೀಯ ನಿವಾಸಿ ಖಾದರ್ ಎಂಬಾತ ಕೃತ್ಯ ನಡೆಸಿದ್ದಾನೆಂದು ಅಮಿತ ಆರೋಪಿಸಿದ್ದಾರೆ. ಖಾದರ್ ಮೇಕೆಗಳನ್ನ ಸಾಕುತ್ತಿದ್ದು ಇತ್ತೀಚೆಗೆ ಆತನ ಮೇಕೆಯೊಂದನ್ನ ನಾಯಿಗಳು ದಾಳಿ ನಡೆಸಿ ಕೊಂದಿದ್ದವು. ಇದರಿಂದ ಕುಪಿತಗೊಂಡ ಖಾದರ್ ಸುತ್ತಮುತ್ತಲ ಬೀದಿ ಮತ್ತು ಸಾಕು ನಾಯಿಗಳಿಗೆ ವಿಷಾಹಾರ ಉಣಿಸಿ ಸುಮಾರು 25 ರಷ್ಟು ನಾಯಿಗಳ ಸಾವಿಗೆ ಕಾರಣವಾಗಿದ್ದಾನೆ. ನಾಯಿಗಳಿಗೆ ವಿಷ ಪ್ರಾಷಣ ಮಾಡಿದ ಬಗ್ಗೆ ಖಾದರ್ ಬಹಿರಂಗವಾಗಿ ಜನರಲ್ಲಿ ಹೇಳಿದ್ದಾಗಿ ಅಮಿತ ಅವರು ಆರೋಪಿಸಿದ್ದಾರೆ. ಇಂದು ಕೂಡ ನಾಯಿಗಳು ವಿಷಾಹಾರ ಸೇವಿಸಿ ವಿಲ ವಿಲ ಒದ್ದಾಡುತ್ತಿರುವ ದೃಶ್ಯ ಮಾಧ್ಯಮದ ಕ್ಯಾಮೆರಾಕ್ಕೆ ಸಿಕ್ಕಿವೆ.
ಅಮಿತ ಅವರು ದನ ಸಾಕಣೆ ಮಾಡುತ್ತಿದ್ದು ನಿನ್ನೆ ಸಂಜೆ ಹಸುವೊಂದನ್ನ ಹುಲ್ಲು ಮೇಯಲು ಮನೆ ಪಕ್ಕದ ದೈವಸ್ಥಾನದ ಬಳಿ ಕಟ್ಟಿ ಹಾಕಿದ್ದರು. ಆರೋಗ್ಯವಾಗಿದ್ದ ಹಸು ನಿನ್ನೆ ರಾತ್ರಿ ನರಳುತ್ತಲೇ ಸಾವನ್ನಪ್ಪಿದೆ. ಪರಿಶೀಲನೆ ನಡೆಸಿದ ಪಶು ವೈದ್ಯರು ಹಸು ವಿಷಾಹಾರ ಸೇವಿಸಿ ಸತ್ತಿರುವುದಾಗಿ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಬಜರಂಗದಳ ಉಳ್ಳಾಲ ನಗರ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಭೇಟಿ ನೀಡಿದ್ದು ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿ ಕೃತ್ಯ ಎಸಗಿದ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ತಲಪಾಡಿ ಗ್ರಾ.ಪಂ ಪಿಡಿಒ ಮತ್ತು ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿಯಲ್ಲಿ ಆಗ್ರಹಿಸಿದ್ದಾರೆ.
ಜಾನುವಾರುಗಳನ್ನ ವಿಷ ಪ್ರಾಷಣಗೈದು ಕೊಂದ ಶಂಕಿತ ಆರೋಪಿ ಖಾದರ್ ಈ ಹಿಂದೆ ಗಂಧ ಕಳ್ಳ ಸಾಗಣೆಯಲ್ಲಿ ತೊಡಗಿದ್ದು, ಸ್ಥಳೀಯ ಮಹಿಳೆಯರಿಗೆ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
Carcasses of 25 stray dogs found in Talapady in Mangalore, suspect poisoning. The incident was brought to light by animal rights activists who spotted the remains.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm