ಬ್ರೇಕಿಂಗ್ ನ್ಯೂಸ್
19-08-23 06:24 pm Mangalore Correspondent ಕರಾವಳಿ
ಉಳ್ಳಾಲ, ಆ.19: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.
ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರ ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.
ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು. ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Actor Upendra wife Priyanka visits Koragajja temple at Kuthar in Mangalore as she visits Mangalore for movie shooting.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am