ಬ್ರೇಕಿಂಗ್ ನ್ಯೂಸ್
19-08-23 06:24 pm Mangalore Correspondent ಕರಾವಳಿ
ಉಳ್ಳಾಲ, ಆ.19: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.
ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಶುಕ್ರವಾರ ಮಧ್ಯಾಹ್ನ ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.
ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು. ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರು ಹೊಲಗೇರಿ ಹೇಳಿಕೆಯಿಂದಾಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Actor Upendra wife Priyanka visits Koragajja temple at Kuthar in Mangalore as she visits Mangalore for movie shooting.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm