ಬ್ರೇಕಿಂಗ್ ನ್ಯೂಸ್
22-08-23 06:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಪ್ರೋಟೋಕಾಲ್ ಹೆಸರಲ್ಲಿ ಬಿಜೆಪಿಯವರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇವರನ್ನು ಜಿಲ್ಲಾಧಿಕಾರಿ ಕಚೇರಿಯ ಒಳಗೆ ಪ್ರತಿಭಟನೆಗೆ ಅವಕಾಶ ನೀಡಿದ್ದೇ ತಪ್ಪು. ಇವರು ಪ್ರತಿಭಟನೆ ಮಾಡಿ ಅಧಿಕಾರಿಗಳನ್ನು ಹೆದರಿಸಲು ಸಾಧ್ಯವಿಲ್ಲ. 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದು ಯಾವುದೇ ಗೊಡ್ಡು ಬೆದರಿಕೆಗಳಿಗೆ ಅಧಿಕಾರಿಗಳು ಸೊಪ್ಪು ಹಾಕಬೇಕಿಲ್ಲ ಎಂದು ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಿಜೆಪಿಯವರು ಅಧಿಕಾರ ಇಲ್ಲದೆ ನೀರಿನಿಂದ ತೆಗೆದ ಮೀನಿನಂತಾಗಿದ್ದಾರೆ. ಹಿಂದೆ ಇವರು ಹೇಳಿದ್ದೆಲ್ಲ ನಡೆಯುತ್ತಿತ್ತು. ಹಿಂದಿನ ಜಿಲ್ಲಾಧಿಕಾರಿಯನ್ನು ತಮ್ಮ ತಾಳಕ್ಕೆ ತಕ್ಕಂತೆ ಕೆಲಸ ಮಾಡಿಸುತ್ತಿದ್ದರು. 71 ಕಡೆ ಅಕ್ರಮ ಸಕ್ರಮ ಪ್ರಕರಣವನ್ನು ಕಾನೂನು ಬಾಹಿರವಾಗಿ ಮಾಡಿದ್ದಾರೆ. ಈಗ ಅದನ್ನು ತನಿಖೆ ಮಾಡಿಸಲು ಜಿಲ್ಲಾಧಿಕಾರಿ ಸಮಿತಿ ಮಾಡಿದ್ದಾರೆ. ಈಗ ಬಿಜೆಪಿಯವರ ಅಹಂಕಾರ, ದಬ್ಬಾಳಿಕೆಗೆ ಕಡಿವಾಣ ಬಿದ್ದಿದೆ. ಹಾಗಾಗಿ ಅಧಿಕಾರಿಗಳನ್ನು ಬೆದರಿಸುವ ತಂತ್ರಕ್ಕೆ ಕೈಹಾಕಿದ್ದಾರೆ ಎಂದರು.

13 ವರ್ಷ ಮಂತ್ರಿಯಾಗಿದ್ದು ಅಧಿಕಾರಿಗಳ ಜೊತೆಗೆ ಯಾವ ರೀತಿ ಕೆಲಸ ಮಾಡಿದ್ದೇನೆಂದು ಎಲ್ಲರಿಗೂ ಗೊತ್ತಿದೆ. ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ನಡೆಯುತ್ತೆ. ಎಲ್ಲರ ಹೆಸರನ್ನೂ ಹಾಕಲಾಗುತ್ತದೆ. ಹಾಗಂತ, ಅಧಿಕಾರಿಗಳನ್ನೇ ಹೆದರಿಸುವ ತಂತ್ರ ಮಾಡಿದರೆ ಇಲ್ಲಿ ಯಾರೂ ಕೇರ್ ಮಾಡಬೇಕಿಲ್ಲ. ಕೆಲವೊಂದು ಕಡೆ ಕಾರ್ಯಕ್ರಮಕ್ಕೆ ಹೋದರೆ ಸ್ಟೇಜಿಗೆ ಹೋಗಬಾರದು ಎಂಬ ಕಂಡೀಶನ್ ಹಾಕುತ್ತಾರೆ. ಮಾಜಿ ಶಾಸಕನ ನೆಲೆಯಲ್ಲಿ ರಿಕ್ಷಾ ಶೆಲ್ಟರ್ ಹಾಕಿದರೂ, ನನ್ನ ಹೆಸರು ಬೇಡ ಎಂದರೂ ಬಿಡದೆ ರಾಜಕೀಯ ಮಾಡಿ ನಿಲ್ಲಿಸಿದ್ದಾರೆ. ಇಂಥ ಕೀಳು ಭಾವನೆ ನನಗಿಲ್ಲ.
ಬಂಟ್ವಾಳ ತಾಲೂಕಿನ ಒಂದು ಪಂಚಾಯತ್ ನಲ್ಲಿ ಪುರುಷರು ಬರಬಾರದೆಂದು ನಾಲ್ವರಿಗೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಅಧಿಕಾರ ಇದ್ದರೆ ಏನೂ ಮಾಡಬಹುದೆಂದು ಅಂದ್ಕೊಂಡಿದ್ದರು. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರು ಎಂದು ರಮಾನಾಥ ರೈ ಹೇಳಿದರು. ಕೆಪಿಸಿಸಿ ಪದಾಧಿಕಾರಿಯೊಬ್ಬರು ಜಿಲ್ಲಾಧಿಕಾರಿಗೆ ಶಿಫಾರಸು ಪತ್ರ ಕೊಟ್ಟ ಬಗ್ಗೆ ಕೇಳಿದ ಪ್ರಶ್ನೆಗೆ, ಅದೇನೂ ನನಗೆ ಗೊತ್ತಿಲ್ಲ. ತಿಳಿಯದ ವಿಚಾರದಲ್ಲಿ ಮಾತನಾಡಬಾರದು ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಬೇಬಿ ಕುಂದರ್, ಕೋಡಿಜಾಲ್ ಇಬ್ರಾಹಿಂ, ವಿಶ್ವಾಸದಾಸ್, ಶುಭೋದಯ ಆಳ್ವ, ಲ್ಯಾನ್ಸಿ ಲಾಟ್ ಪಿಂಟೋ, ಸುಹಾನ್ ಆಳ್ವ, ಅಪ್ಪಿ, ಶಾಹುಲ್ ಹಮೀದ್ ಇದ್ದರು.
Mangalore senior Congress leader ramanath rai Slams BJP leaders for protesting at DC office.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am