ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm