ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm