ಬ್ರೇಕಿಂಗ್ ನ್ಯೂಸ್
22-08-23 10:29 pm HK News Desk ಕರಾವಳಿ
ಬಂಟ್ವಾಳ, ಆಗಸ್ಟ್ 22: ವಿಟ್ಲ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕರನ್ನು ಪೊಲೀಸರು ಪುತ್ತೂರಿನಲ್ಲಿ ಪತ್ತೆ ಮಾಡಿದ್ದಾರೆ.
ನಿನ್ನೆ ಬೆಳಗ್ಗೆ ಹಾಸ್ಟೆಲಿನಿಂದ ದೀಕ್ಷಿತ್ (15) ಮತ್ತು ಗಗನ್ (14) ಎಂಬ ಇಬ್ಬರು ವಿದ್ಯಾರ್ಥಿಗಳು ಶಾಲೆಗೆಂದು ತೆರಳಿದ್ದರು. ಸಂಜೆ 4.30ಕ್ಕೆ ಹಾಸ್ಟೆಲಿಗೆ ಮರಳದೇ ಇದ್ದುದರಿಂದ ಇತರ ಮಕ್ಕಳಲ್ಲಿ ಕೇಳಿದಾಗ, ಅವರಿಬ್ಬರು ಶಾಲೆಗೆ ಬಂದಿಲ್ಲ ಎನ್ನುವುದು ತಿಳಿದುಬಂದಿತ್ತು. ಮಕ್ಕಳಿಬ್ಬರು ಶಾಲೆಗೆ ಬಾರದೆ ಎಲ್ಲಿ ಹೋಗಿದ್ದಾರೆಂದು ಗಾಬರಿಗೊಂಡ ಶಾಲೆಯ ವಾರ್ಡನ್ ಸೇರಿದಂತೆ ಇತರ ಸಿಬಂದಿ ಅಕ್ಕ ಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ.
ಆನಂತರ ವಿಟ್ಲ ಠಾಣೆಯಲ್ಲಿ ಇಬ್ಬರು ಬಾಲಕರ ನಾಪತ್ತೆ ಬಗ್ಗೆ ದೂರು ದಾಖಲಿಸಲಾಗಿತ್ತು. ಬಾಲಕರಿಬ್ಬರು ನಿನ್ನೆ ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಪತ್ತೆಯಾಗಿದ್ದಾರೆ. ಸಾರ್ವಜನಿಕರು ಬಾಲಕರಿಬ್ಬರನ್ನು ನೋಡಿ ಪ್ರಶ್ನೆ ಮಾಡದಾಗ, ಚಿತ್ರದುರ್ಗಕ್ಕೆ ಹೋಗಬೇಕು, ಹಣ ಇಲ್ಲದೆ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದೇವೆ ಎಂದು ತಿಳಿಸಿದ್ದರು. ಬಳಿಕ ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜ ವಿಚಾರ ತಿಳಿಸಿದ್ದಾರೆ.
ಆಗಸ್ಟ್ 21ರ ಬೆಳಗ್ಗೆ ಹಾಸ್ಟೆಲಿನಿಂದ ವಿಟ್ಲಕ್ಕೆ ಅಲ್ಲಿಂದ ಪುತ್ತೂರಿಗೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ಪುತ್ತೂರು ತಲುಪಿದಾಗ, ಚಿತ್ರದುರ್ಗಕ್ಕೆ ಹೋಗುವ ಬಸ್ಸಿಗೆ ತೆರಳಲು ಕೈಯಲ್ಲಿ ಕಾಸಿಲ್ಲದಾಗಿತ್ತು. ಹಾಗಾಗಿ ನಿಲ್ದಾಣದಲ್ಲಿಯೇ ಕುಳಿತುಕೊಂಡಿದ್ದರು. ಮನೆಯವರನ್ನು ನೋಡುವುದಕ್ಕಾಗಿ ಚಿತ್ರದುರ್ಗಕ್ಕೆ ಹೊರಟಿದ್ದೇವೆಂದು ಪೊಲೀಸರಲ್ಲಿ ತಿಳಿಸಿದ್ದಾರೆ. ಇಬ್ಬರು ಬಾಲಕರನ್ನೂ ಪೋಷಕರಿಗೆ ಮಾಹಿತಿ ನೀಡಿ ಮತ್ತೆ ಹಾಸ್ಟೆಲಿಗೆ ಸೇರಿಸಲಾಗಿದೆ.
Missing minor youths from Vitla found at Puttur in Mangalore.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am