ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm