ಬ್ರೇಕಿಂಗ್ ನ್ಯೂಸ್
24-08-23 07:43 pm Mangalore Correspondent ಕರಾವಳಿ
ಉಳ್ಳಾಲ, ಆ.24: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಹಳ್ಳೂರ ಎಂಬಾತ ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ ಉಚಿತ ಪ್ರಯಾಣವಿಲ್ಲವೆಂದು ಹಣ ಕೇಳಿದ್ದು ಹಣ ನೀಡದ್ದಕ್ಕೆ ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸಿ ಅಮಾನವೀಯತೆ ಮರೆದಿದ್ದಾನೆ.


ಕುಂಪಲ ಸರಕಾರಿ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಇಂದು ಶಾಲೆ ಮಗಿಸಿ ಸರಕಾರಿ ಬಸ್ಸು ಹತ್ತಿದ್ದಾರೆ. ಬಸ್ಸಿನ ಎಂದಿನ ನಿರ್ವಾಹಕ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಕೇಳುತ್ತಿರಲಿಲ್ಲವಂತೆ. ಹಾಗಾಗಿ ವಿದ್ಯಾರ್ಥಿನಿಯರು ಆಧಾರ್ ತಂದಿರಲಿಲ್ಲ. ಇಂದು ಖಾಯಂ ನಿರ್ವಾಹಕ ರಜೆ ಮಾಡಿದ್ದು ಹುಸೇನ್ ಸಾಬ್ ಬದಲಿ ಕರ್ತವ್ಯದಲ್ಲಿದ್ದ. ಹುಸೇನ್ ಎಳೆಯ ವಿದ್ಯಾರ್ಥಿಗಳೆಂದು ಕರುಣೆ ತೋರದೆ ಜೇಬಲ್ಲಿ ಹಣ ಇಲ್ಲದೆ ಕುಂಪಲದ ಬಗಂಬಿಲಕ್ಕೆ ತೆರಳಲಿದ್ದ ಐವರು ಮಕ್ಕಳನ್ನ ಮೂರುಕಟ್ಟೆ ಎಂಬಲ್ಲೇ ಕೆಳಗಿಳಿಸಿ ತೆರಳಿದ್ದಾನೆ.
ಈ ವಿದ್ಯಮಾನವನ್ನ ಬಸ್ಸಲ್ಲೇ ಇದ್ದ ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಗುಲಾಬಿ ಅವರು ಗಮನಿಸಿದ್ದಾರೆ.
ಸಂಜೆ ಸ್ಥಳೀಯರು ಕುಂಪಲ ಶಾಲೆಯ ಎದುರೇ ಬಸ್ಸನ್ನ ತಡೆದು ನಿಲ್ಲಿಸಿದ್ದು ನಿರ್ವಾಹಕನನ್ನ ತರಾಟೆಗೆತ್ತಿದ್ದಾರೆ. ಸ್ಥಳೀಯರಾದ ಯಶವಂತ್ ಅವರು ಕೆಎಸ್ ಆರ್ ಟಿಸಿ ಅಧಿಕಾರಿ ರಮ್ಯ ಅವರನ್ನ ಸಂಪರ್ಕಿಸಿ ಎಳೆಯ ಮಕ್ಕಳನ್ನ ಮಾವೀಯತೆ ತೋರಿಸದೆ ಬಸ್ಸಿನಿಂದ ಕೆಳಗಿಳಿಸಿದ ತಪ್ಪಿತಸ್ಥ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No Aaadhar card conductor forces school student to get down from bus at Kumpala in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm