ಬ್ರೇಕಿಂಗ್ ನ್ಯೂಸ್
24-08-23 07:43 pm Mangalore Correspondent ಕರಾವಳಿ
ಉಳ್ಳಾಲ, ಆ.24: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಹಳ್ಳೂರ ಎಂಬಾತ ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ ಉಚಿತ ಪ್ರಯಾಣವಿಲ್ಲವೆಂದು ಹಣ ಕೇಳಿದ್ದು ಹಣ ನೀಡದ್ದಕ್ಕೆ ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸಿ ಅಮಾನವೀಯತೆ ಮರೆದಿದ್ದಾನೆ.


ಕುಂಪಲ ಸರಕಾರಿ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಇಂದು ಶಾಲೆ ಮಗಿಸಿ ಸರಕಾರಿ ಬಸ್ಸು ಹತ್ತಿದ್ದಾರೆ. ಬಸ್ಸಿನ ಎಂದಿನ ನಿರ್ವಾಹಕ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಕೇಳುತ್ತಿರಲಿಲ್ಲವಂತೆ. ಹಾಗಾಗಿ ವಿದ್ಯಾರ್ಥಿನಿಯರು ಆಧಾರ್ ತಂದಿರಲಿಲ್ಲ. ಇಂದು ಖಾಯಂ ನಿರ್ವಾಹಕ ರಜೆ ಮಾಡಿದ್ದು ಹುಸೇನ್ ಸಾಬ್ ಬದಲಿ ಕರ್ತವ್ಯದಲ್ಲಿದ್ದ. ಹುಸೇನ್ ಎಳೆಯ ವಿದ್ಯಾರ್ಥಿಗಳೆಂದು ಕರುಣೆ ತೋರದೆ ಜೇಬಲ್ಲಿ ಹಣ ಇಲ್ಲದೆ ಕುಂಪಲದ ಬಗಂಬಿಲಕ್ಕೆ ತೆರಳಲಿದ್ದ ಐವರು ಮಕ್ಕಳನ್ನ ಮೂರುಕಟ್ಟೆ ಎಂಬಲ್ಲೇ ಕೆಳಗಿಳಿಸಿ ತೆರಳಿದ್ದಾನೆ.
ಈ ವಿದ್ಯಮಾನವನ್ನ ಬಸ್ಸಲ್ಲೇ ಇದ್ದ ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಗುಲಾಬಿ ಅವರು ಗಮನಿಸಿದ್ದಾರೆ.
ಸಂಜೆ ಸ್ಥಳೀಯರು ಕುಂಪಲ ಶಾಲೆಯ ಎದುರೇ ಬಸ್ಸನ್ನ ತಡೆದು ನಿಲ್ಲಿಸಿದ್ದು ನಿರ್ವಾಹಕನನ್ನ ತರಾಟೆಗೆತ್ತಿದ್ದಾರೆ. ಸ್ಥಳೀಯರಾದ ಯಶವಂತ್ ಅವರು ಕೆಎಸ್ ಆರ್ ಟಿಸಿ ಅಧಿಕಾರಿ ರಮ್ಯ ಅವರನ್ನ ಸಂಪರ್ಕಿಸಿ ಎಳೆಯ ಮಕ್ಕಳನ್ನ ಮಾವೀಯತೆ ತೋರಿಸದೆ ಬಸ್ಸಿನಿಂದ ಕೆಳಗಿಳಿಸಿದ ತಪ್ಪಿತಸ್ಥ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No Aaadhar card conductor forces school student to get down from bus at Kumpala in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm