ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.

ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
24-10-25 06:04 pm
HK News Desk
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am