ಬ್ರೇಕಿಂಗ್ ನ್ಯೂಸ್
07-11-20 03:57 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 07: ಅಮೆರಿಕದ ಅಧ್ಯಕ್ಷರ ಹುದ್ದೆಯ ಆಯ್ಕೆಗೆ ಭಾರೀ ಸೆಣಸಾಟ ನಡೆಯುತ್ತಿದೆ. ಈ ಮಧ್ಯೆ ಅಮೆರಿಕದ ಸಂಸತ್ತಿಗೆ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ.
ಅಮೆರಿಕದಲ್ಲಿ ವಕೀಲರಾಗಿರುವ, ನವದೆಹಲಿ ಮೂಲದ ರಾಜಾ ಕೃಷ್ಣಮೂರ್ತಿಯವರು 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ತಿಗೆ ಆಯ್ಕೆಯಾಗಿದ್ದರು. ಬಳಿಕ ಕಳೆದ ವರ್ಷ ತನ್ನ ತಾಯಿ ವಿಜಯಾ ಕೃಷ್ಣಮೂರ್ತಿ ಜತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭಿಷೇಕ ಸೇವೆ ಪೂರೈಸಿದರು.

ಈ ಬಾರಿ ಸೆನೆಟ್ ಪ್ರತಿನಿಧಿಯ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಬೆಂಗಳೂರು ಮೂಲದ ಜ್ಯೋತಿಷಿ, ಅಮೆರಿಕದ ಚಿಕಾಗೋದಲ್ಲಿ ಹಿಂದೂ ದೇವಸ್ಥಾನ ಒಂದರಲ್ಲಿ ಅರ್ಚಕರಾಗಿರುವ ಪುರೋಹಿತ ನಾಗೇಂದ್ರ ರಾವ್ ಸಲಹೆಯಂತೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಹೊತ್ತುಕೊಂಡಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಹರಕೆ ಈಡೇರಿಸಲು ಕ್ಷೇತ್ರಕ್ಕೆ ಬಂದಿರುವುದಾಗಿ ರಾಜಾ ಕೃಷ್ಣಮೂರ್ತಿ ಹೇಳಿದ್ದಾರೆ.
ಭೇಟಿ ಸಂದರ್ಭ ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶರು ಮಾರ್ಗದರ್ಶನ ನೀಡಿದರು. ಈ ಗೆಲುವಿನಲ್ಲಿ ದೇವರ ದಯೆಯೂ ಇದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿರುವ ಅವರು ಪ್ರತಿಕ್ರಿಯಿಸಿದ್ದಾರೆ.
America Democratic Party Senate Member Raja Krishnamoorthi visited Kukke Subramanya Temple, Mangalore to offer special pooja.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm