ಬ್ರೇಕಿಂಗ್ ನ್ಯೂಸ್
27-08-23 08:47 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಆಗಬೇಕು, ನೈಜ ಆರೋಪಿ ಪತ್ತೆಯಾಗಬೇಕೆಂದು ಎಲ್ಲ ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಅತ್ಯಾಚಾರಗೈದ ಆರೋಪಿ "ಕೊರಗಜ್ಜ ಕೊರಗಜ್ಜ" ಎಂದು ನರಳುತ್ತ ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆ ಮಾಡಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಉರುಳು ಸೇವೆ ನಡೆಸಿದ್ದಾರೆ. ಮೊದಲು ಪ್ರಾರ್ಥನೆ ಸಲ್ಲಿಸಿ ಬಳಿಕ ಸೌಜನ್ಯಾ ಭಾವಚಿತ್ರ ಹಿಡಿದು ನೆಲದಲ್ಲೇ ಒಂದು ಸುತ್ತು ಉರುಳು ಸೇವೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಸಿಗಬೇಕೆಂದು ಎಲ್ಲ ಕಡೆ ಪ್ರತಿಭಟನೆಗಳು ನಡೀತಿದ್ರೂ ಸರ್ಕಾರ ಮೌನ ವಹಿಸಿದೆ. ಸೌಜನ್ಯಾ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ. ಆರೋಪಿ ಯಾರೆಂಬುದು ಪತ್ತೆ ಆಗಬೇಕು , ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡಬೇಕು ಎಂದರು.
Udupi Nithyananda Volakadu offers Urulu Seve at Koragajja Temple for justice for Sowjanya rape and murder justice.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm