ಬ್ರೇಕಿಂಗ್ ನ್ಯೂಸ್
07-11-20 06:02 pm Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 7: ಭಾರೀ ಕುತೂಹಲ ಮೂಡಿಸಿದ್ದ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿದ ಕಸರತ್ತು ಫಲ ನೀಡಲಿಲ್ಲ. ಕೊನೆಕ್ಷಣದಲ್ಲಿ ಕಾಂಗ್ರೆಸ್, ಎಸ್ ಡಿಪಿಐ ಪಕ್ಷದ ಬೆಂಬಲ ಪಡೆದು ಪುರಸಭೆಯ ಅಧಿಕಾರ ಗಿಟ್ಟಿಸಿಕೊಂಡಿದೆ.
ಕಾಂಗ್ರೆಸ್ ಪಕ್ಷದ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಗೋವಿಂದ ಪ್ರಭು ನಾಮಪತ್ರ ಸಲ್ಲಿಸಿದ್ದರೆ, ಉಪಾಧ್ಯಕ್ಷೆ ಸ್ಥಾನಕ್ಕೆ ಮೀನಾಕ್ಷಿ ಗೌಡ ನಾಮಪತ್ರ ಸಲ್ಲಿಸಿದ್ದರು. ಎಸ್ ಡಿಪಿಐನಿಂದ ಆರಂಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮುನೀಶ್ ಅಲಿ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬೇಕಾದ ಅರ್ಹ ಅಭ್ಯರ್ಥಿ ಎಸ್.ಡಿ.ಪಿ.ಐ. ಬಳಿ ಇರಲಿಲ್ಲ. ಕಾಂಗ್ರೆಸ್ 12 ಸ್ಥಾನ, ಬಿಜೆಪಿ 11 ಹಾಗೂ ಎಸ್ ಡಿಪಿಐ 4 ಸ್ಥಾನಗಳನ್ನು ಪಡೆದಿದ್ದವು. ಸ್ಥಳೀಯ ಶಾಸಕ ಮತ್ತು ಸಂಸದರಿಗೆ ಮತ ಚಲಾಯಿಸುವ ಅರ್ಹತೆ ಇದ್ದುದರಿಂದ ಬಿಜೆಪಿ 13 ಸ್ಥಾನಗಳನ್ನು ಪಡೆದು ಅಧಿಕಾರ ಗಳಿಸುವ ವಿಶ್ವಾಸದಲ್ಲಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಎಸ್.ಡಿ.ಪಿ.ಐ. ಅಭ್ಯರ್ಥಿ ಮುನೀಶ್ ಅಲಿ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸಿಗೆ ಬೆಂಬಲ ಘೋಷಿಸಿದರು.





ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಾಗ, ಕಾಂಗ್ರೆಸ್ ಪರವಾಗಿ 12 ಸದಸ್ಯರು ಮತ್ತು ಎಸ್ ಡಿಪಿಐನ 4 ಸದಸ್ಯರು ಒಟ್ಟು 16 ಮತಗಳೊಂದಿಗೆ ಮುಹಮ್ಮದ್ ಶರೀಫ್ ಅಧ್ಯಕ್ಷರಾಗಿ ಮತ್ತು ಜೆಸಿಂತಾ ಡಿಸೋಜ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿಯ 11 ಸದಸ್ಯರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮತಗಳು ಸೇರಿ ಬಿಜೆಪಿ ಅಭ್ಯರ್ಥಿಗಳಿಗೆ 13 ಮತಗಳು ಚಲಾವಣೆಯಾದವು. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶಿಲ್ದಾರ್ ಎಸ್.ಆರ್.ರಶ್ಮಿ ಕರ್ತವ್ಯ ನಿರ್ವಹಿಸಿದರು.
Congress attains victory in Bantwal Town Municipality Elections that was held here on 7 November, Saturday 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am