ಬ್ರೇಕಿಂಗ್ ನ್ಯೂಸ್
29-08-23 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಹಿರಿಯ ಚಿತ್ರನಟ, ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅನಂತನಾಗ್ ಅವರ 75ನೇ ವರ್ಷದ ಜನ್ಮದಿನದ ಸಂಭ್ರಮ ಸಲುವಾಗಿ ಸೆಪ್ಟೆಂಬರ್ 3ರಂದು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅನಂತನಾಗ್ ಅಭಿನಂದನಾ ಸಮಿತಿ ಸಂಚಾಲಕ ಗೋಪಿನಾಥ್ ಭಟ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 9:30ಕ್ಕೆ ಅನಂತ್ ನಾಗ್ ದಂಪತಿಯನ್ನು ಸಾರೋಟಿನಲ್ಲಿ ಡೊಂಗರಕೇರಿ ಕೆನರಾ ಹೈಸ್ಕೂಲ್ ನಿಂದ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಗುವುದು. 10 ಗಂಟೆಗೆ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸಹಿತ ಗಣ್ಯರು ಉದ್ಘಾಟಿಸಲಿದ್ದಾರೆ. ಸಿನಿಮಾ ದಿಗ್ಗಜರು, ಪತ್ರಕರ್ತರು, ಯುವ ಸಮುದಾಯದೊಂದಿಗೆ ಸಂವಹನ ಕಾರ್ಯಕ್ರಮ, ಮಧ್ಯಾಹ್ನ 2 ಗಂಟೆಯಿಂದ ಮಣಿಕಾಂತ್ ಕದ್ರಿ, ರವೀಂದ್ರ ಪ್ರಭು ಹಾಗೂ ತಂಡದಿಂದ ಅನಂತ್ ನಾಗ್ ಅವರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ, ಸಾಯಂಕಾಲ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, ಅನಂತನಾಗ್ 75 ಸಂವತ್ಸರದ ಸಡಗರ ಮತ್ತು ಅವರ ಚಿತ್ರ ಬದುಕಿನ ಐದು ದಶಕಗಳ ಸಾರ್ಥಕ ಪಯಣದ ಸಂಭ್ರಮವನ್ನು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಸಾಮಾಜಿಕ ಕಾರ್ಯಗಳಲ್ಲಿಯೂ ಕಳಕಳಿ ಹೊಂದಿರುವ ಅನಂತನಾಗ್ ಯುವ ಪೀಳಿಗೆಗೂ ಮಾದರಿಯಾದವರು. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಯಶಸ್ಸುಗೊಳಿಸಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಶೆಟ್ಟಿ, ಗಿರಿಧರ್ ಶೆಟ್ಟಿ, ಕುದ್ರೋಳಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Anant Nag 75th birthday in Mangalore, whole day celebration to be held at Canara High school.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm