ಬ್ರೇಕಿಂಗ್ ನ್ಯೂಸ್
29-08-23 09:44 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಹಿರಿಯ ಚಿತ್ರನಟ, ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅನಂತನಾಗ್ ಅವರ 75ನೇ ವರ್ಷದ ಜನ್ಮದಿನದ ಸಂಭ್ರಮ ಸಲುವಾಗಿ ಸೆಪ್ಟೆಂಬರ್ 3ರಂದು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅನಂತನಾಗ್ ಅಭಿನಂದನಾ ಸಮಿತಿ ಸಂಚಾಲಕ ಗೋಪಿನಾಥ್ ಭಟ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 9:30ಕ್ಕೆ ಅನಂತ್ ನಾಗ್ ದಂಪತಿಯನ್ನು ಸಾರೋಟಿನಲ್ಲಿ ಡೊಂಗರಕೇರಿ ಕೆನರಾ ಹೈಸ್ಕೂಲ್ ನಿಂದ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಗುವುದು. 10 ಗಂಟೆಗೆ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸಹಿತ ಗಣ್ಯರು ಉದ್ಘಾಟಿಸಲಿದ್ದಾರೆ. ಸಿನಿಮಾ ದಿಗ್ಗಜರು, ಪತ್ರಕರ್ತರು, ಯುವ ಸಮುದಾಯದೊಂದಿಗೆ ಸಂವಹನ ಕಾರ್ಯಕ್ರಮ, ಮಧ್ಯಾಹ್ನ 2 ಗಂಟೆಯಿಂದ ಮಣಿಕಾಂತ್ ಕದ್ರಿ, ರವೀಂದ್ರ ಪ್ರಭು ಹಾಗೂ ತಂಡದಿಂದ ಅನಂತ್ ನಾಗ್ ಅವರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ, ಸಾಯಂಕಾಲ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, ಅನಂತನಾಗ್ 75 ಸಂವತ್ಸರದ ಸಡಗರ ಮತ್ತು ಅವರ ಚಿತ್ರ ಬದುಕಿನ ಐದು ದಶಕಗಳ ಸಾರ್ಥಕ ಪಯಣದ ಸಂಭ್ರಮವನ್ನು ಅಭಿಮಾನಿಗಳನ್ನು ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ಸಾಮಾಜಿಕ ಕಾರ್ಯಗಳಲ್ಲಿಯೂ ಕಳಕಳಿ ಹೊಂದಿರುವ ಅನಂತನಾಗ್ ಯುವ ಪೀಳಿಗೆಗೂ ಮಾದರಿಯಾದವರು. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಯಶಸ್ಸುಗೊಳಿಸಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಶೆಟ್ಟಿ, ಗಿರಿಧರ್ ಶೆಟ್ಟಿ, ಕುದ್ರೋಳಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Anant Nag 75th birthday in Mangalore, whole day celebration to be held at Canara High school.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am