ಬ್ರೇಕಿಂಗ್ ನ್ಯೂಸ್
30-08-23 07:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಉಳ್ಳಾಲ ಉಳಿಯ ಆಸುಪಾಸಿನಲ್ಲಿ ನೇತ್ರಾವತಿ ಹಿನ್ನೀರು ಪ್ರದೇಶದಲ್ಲಿ ಮತ್ತೆ ಮಾಲಿನ್ಯ ಸೇರಿಕೊಂಡಿದ್ದು, ಜಲಚರಗಳು ಸತ್ತು ಬಿದ್ದಿರುವುದನ್ನು ಅಲ್ಲಿನ ಮೀನುಗಾರರು ಮಾಧ್ಯಮದ ಗಮನ ಸೆಳೆದಿದ್ದಾರೆ.
2-3 ದಿನಗಳಿಂದ ಉಳಿಯ ಭಾಗದಲ್ಲಿ ಹಿನ್ನೀರಿನಲ್ಲಿ ನೀರು ಮಾಲಿನ್ಯಗೊಂಡಿದ್ದು, ಬಣ್ಣ ಬದಲಾಗಿದೆ. ಈ ಭಾಗದಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿದ್ದು, ಮೀನುಗಾರರು ಆತಂಕಗೊಂಡಿದ್ದಾರೆ. ಉಳಿಯ ಪಕ್ಕದಲ್ಲಿಯೇ ಫಿಶ್ ಮೀಲ್ ಗಳಿದ್ದು ಅದರ ತ್ಯಾಜ್ಯವನ್ನು ನೇರವಾಗಿ ಕಡಲಿಗೆ ಬಿಡಲಾಗುತ್ತಿದ್ದು ಅದರಿಂದಾಗಿಯೇ ಸಮಸ್ಯೆ ಆಗಿದೆ ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.







ಸ್ಥಳೀಯ ನಾಡದೋಣಿ ಮೀನುಗಾರ ಪ್ರೇಮಪ್ರಕಾಶ್ ಬಳಿ ಕೇಳಿದಾಗ, ಬಹಳಷ್ಟು ಮೀನುಗಳು ಸತ್ತು ಬಿದ್ದಿವೆ. ಆದರೆ ನಿಶ್ಚಿತವಾಗಿ ಇಂಥದ್ದೇ ಕಾರಣ ಎಂದು ಹೇಳಲಾಗದು. ಮಳೆಗಾಲ ಕಳೆದ ಬಳಿಕ ಸಿಹಿ ನೀರು ಹಿನ್ನೀರಿಗೆ ನುಗ್ಗಿದರೆ ಇಂತಹ ಸಮಸ್ಯೆ ಆಗುತ್ತದೆ. ಇಂತಹ ನೀರಿನಲ್ಲಿ ಆಮ್ಲಜನಕ ಕಡಿಮೆಯಿದ್ದರೆ ಮೀನುಗಳು ಸಾಯುತ್ತವೆ. ಇದರ ಜೊತೆಗೆ ಫಿಶ್ ಮೀಲ್ ಗಳ ತ್ಯಾಜ್ಯವೂ ಸೇರಿಕೊಂಡಿರುವ ಸಾಧ್ಯತೆ ಇದೆ. ಮೀನುಗಾರಿಕೆ ಇಲಾಖೆಗೆ ದೂರು ನೀಡಿದ್ದೇವೆ. ತಜ್ಞರು ಆಗಮಿಸಿದ್ದು ನೀರನ್ನು ಪರೀಕ್ಷೆಗೆ ಒಯ್ದಿದ್ದಾರೆ ಎಂದು ತಿಳಿಸಿದ್ದಾರೆ.
ಎರಡು ದಿನದಲ್ಲಿ ಅಂದಾಜು 80 ಶೇಕಡಾದಷ್ಟು ಮೀನುಗಳು ಸತ್ತಿವೆ ಎನ್ನುತ್ತಿದ್ದಾರೆ. ಈ ಭಾಗದಲ್ಲಿ ಕಾಂಡ್ಲಾ ವನಗಳಿದ್ದು ಇದರ ಎಡೆಯಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುತ್ತವೆ. ಇಂತಹ ಜಾಗದಲ್ಲೇ ಮೀನುಗಳು ಸತ್ತಿರುವುದರಿಂದ ದೊಡ್ಡ ಮಟ್ಟಿನ ಪರಿಣಾಮ ಆಗಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Hundreds of fish killed by Fish Mill pollution at Ullal in Mangalore. Water turns completely poisonous due to chemicals released by Fish mill factory.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm