ಬ್ರೇಕಿಂಗ್ ನ್ಯೂಸ್
30-08-23 07:18 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಉಳ್ಳಾಲ ಉಳಿಯ ಆಸುಪಾಸಿನಲ್ಲಿ ನೇತ್ರಾವತಿ ಹಿನ್ನೀರು ಪ್ರದೇಶದಲ್ಲಿ ಮತ್ತೆ ಮಾಲಿನ್ಯ ಸೇರಿಕೊಂಡಿದ್ದು, ಜಲಚರಗಳು ಸತ್ತು ಬಿದ್ದಿರುವುದನ್ನು ಅಲ್ಲಿನ ಮೀನುಗಾರರು ಮಾಧ್ಯಮದ ಗಮನ ಸೆಳೆದಿದ್ದಾರೆ.
2-3 ದಿನಗಳಿಂದ ಉಳಿಯ ಭಾಗದಲ್ಲಿ ಹಿನ್ನೀರಿನಲ್ಲಿ ನೀರು ಮಾಲಿನ್ಯಗೊಂಡಿದ್ದು, ಬಣ್ಣ ಬದಲಾಗಿದೆ. ಈ ಭಾಗದಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿದ್ದು, ಮೀನುಗಾರರು ಆತಂಕಗೊಂಡಿದ್ದಾರೆ. ಉಳಿಯ ಪಕ್ಕದಲ್ಲಿಯೇ ಫಿಶ್ ಮೀಲ್ ಗಳಿದ್ದು ಅದರ ತ್ಯಾಜ್ಯವನ್ನು ನೇರವಾಗಿ ಕಡಲಿಗೆ ಬಿಡಲಾಗುತ್ತಿದ್ದು ಅದರಿಂದಾಗಿಯೇ ಸಮಸ್ಯೆ ಆಗಿದೆ ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.







ಸ್ಥಳೀಯ ನಾಡದೋಣಿ ಮೀನುಗಾರ ಪ್ರೇಮಪ್ರಕಾಶ್ ಬಳಿ ಕೇಳಿದಾಗ, ಬಹಳಷ್ಟು ಮೀನುಗಳು ಸತ್ತು ಬಿದ್ದಿವೆ. ಆದರೆ ನಿಶ್ಚಿತವಾಗಿ ಇಂಥದ್ದೇ ಕಾರಣ ಎಂದು ಹೇಳಲಾಗದು. ಮಳೆಗಾಲ ಕಳೆದ ಬಳಿಕ ಸಿಹಿ ನೀರು ಹಿನ್ನೀರಿಗೆ ನುಗ್ಗಿದರೆ ಇಂತಹ ಸಮಸ್ಯೆ ಆಗುತ್ತದೆ. ಇಂತಹ ನೀರಿನಲ್ಲಿ ಆಮ್ಲಜನಕ ಕಡಿಮೆಯಿದ್ದರೆ ಮೀನುಗಳು ಸಾಯುತ್ತವೆ. ಇದರ ಜೊತೆಗೆ ಫಿಶ್ ಮೀಲ್ ಗಳ ತ್ಯಾಜ್ಯವೂ ಸೇರಿಕೊಂಡಿರುವ ಸಾಧ್ಯತೆ ಇದೆ. ಮೀನುಗಾರಿಕೆ ಇಲಾಖೆಗೆ ದೂರು ನೀಡಿದ್ದೇವೆ. ತಜ್ಞರು ಆಗಮಿಸಿದ್ದು ನೀರನ್ನು ಪರೀಕ್ಷೆಗೆ ಒಯ್ದಿದ್ದಾರೆ ಎಂದು ತಿಳಿಸಿದ್ದಾರೆ.
ಎರಡು ದಿನದಲ್ಲಿ ಅಂದಾಜು 80 ಶೇಕಡಾದಷ್ಟು ಮೀನುಗಳು ಸತ್ತಿವೆ ಎನ್ನುತ್ತಿದ್ದಾರೆ. ಈ ಭಾಗದಲ್ಲಿ ಕಾಂಡ್ಲಾ ವನಗಳಿದ್ದು ಇದರ ಎಡೆಯಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುತ್ತವೆ. ಇಂತಹ ಜಾಗದಲ್ಲೇ ಮೀನುಗಳು ಸತ್ತಿರುವುದರಿಂದ ದೊಡ್ಡ ಮಟ್ಟಿನ ಪರಿಣಾಮ ಆಗಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Hundreds of fish killed by Fish Mill pollution at Ullal in Mangalore. Water turns completely poisonous due to chemicals released by Fish mill factory.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm